|
| ಧಿಮಾಕಿನಲ್ಲಿ ರಾಜ್ರ ಜಲಕ್! |
| ಬೆಂಗಳೂರು, ಶನಿವಾರ, 19 ಜುಲೈ 2008 ( 15:05 IST ) | |
ಧಿಮಾಕು ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದಲ್ಲಿ ನವೀನ್ ಕೃಷ್ಣ ನಾಯಕರಾಗಿ ನಟಿಸಿದ್ದಾರೆ. ಚಿತ್ರದ ಹಾಡೊಂದರ ದೃಶ್ಯದಲ್ಲಿ ಡಾ. ರಾಜ್ ಅವರ ಐದು ಭಾವಚಿತ್ರಗಳನ್ನು ಬಳಸಲಾಗಿದೆಯಂತೆ. ಅದು ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಹಾಡು. ಇದಕ್ಕೆ ರಾಜ್ ಅವರ ಭಾವಚಿತ್ರ ಅಲ್ಲಿ ಅಗತ್ಯವಾಗಿ ಬೇಕಾಗುತ್ತದೆ ಎನ್ನುತ್ತಾರೆ ನವೀನ್ ಕೃಷ್ಣ.
ಧಿಮಾಕು ಹಾಡಿನ ಬಗ್ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡ ಸಾಂಗ್, ಐಟಂ ಸಾಂಗ್ ಹೀಗೆ ಎಲ್ಲ ರೀತಿಯ ಹಾಡುಗಳು ಚಿತ್ರದಲ್ಲಿರುವುದರಿಂದ ಜನ ಇದನ್ನು ಇಷ್ಟಪಡುತ್ತಾರೆ ಎಂಬ ವಿಶ್ವಾಸ ಚಿತ್ರತಂಡದ್ದು. ಚಿತ್ರದ ಹಾಡೊಂದರಲ್ಲಿ ಪ್ರೇಮ್, ತರುಣ್ ಕುಣಿದಿದ್ದಾರೆ. ಇಲ್ಲಿ ರಂಗಾಯಣ ರಘು ಮುಖ್ಯ ಪಾತ್ರ ನಿರ್ವಹಿಸಿದ್ದಾರೆ.
ಚಿತ್ರದ ಕ್ಯಾಸೆಟ್ ಬಿಡುಗಡೆ ಸಮಾರಂಬಕ್ಕೆ ಸಚಿವರಾದ ಆರ್.ಅಶೋಕ್ ಹಾಗೂ ಕಟ್ಟಾ ಸುಬ್ರಹ್ಮಣ್ಯ ಬಂದು ನಾಯಕನಿಗೆ ಹಾರೈಸಿದರು. ಅಂದಹಾಗೆ ಈ ಚಿತ್ರವನ್ನು ಮಗನಿಗಾಗಿ ಶ್ರೀನಿವಾಸಮೂರ್ತಿ ನಿರ್ಮಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|