|
| ವಿನೋದ್ ರಾಜ್ ಸಸ್ಪೆನ್ಸ್ |
| ಬುಧವಾರ, 7 ಜನವರಿ 2009 ( 18:36 IST ) | |
ಮೊದಲ ಬಾರಿಗೆ ವಿನೋದ್ ರಾಜ್ ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ ಮಾಡುತ್ತಿದ್ದಾರೆ. 'ಈ ಬಾರಿ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಮಾಡುತ್ತಿದ್ದೇನೆ. ನನ್ನ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಇಂಥದ್ದೊಂದು ಕಥೆಯಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈಗಿನ ಪ್ರೇಕ್ಷಕರು ಅಪೇಕ್ಷಿಸುವ ಎಲ್ಲ ಅಂಶಗಳು ಚಿತ್ರದಲ್ಲಿದೆ' ಎನ್ನುತ್ತಾರೆ ವಿನೋದ್ ರಾಜ್.
ಕಳೆದ ವರ್ಷ ಅವರು ಪೊಲೀಸ್ ಅಧಿಕಾರಿಯಾಗಿ ನಟಿಸಿದ 'ಶುಕ್ರ' ಚಿತ್ರ ಗೆಲ್ಲಲಿಲ್ಲ. ಅದಕ್ಕೂ ಹಿಂದೆ 'ಕನ್ನಡದ ಕಂದ' ಚಿತ್ರ ಗೆದ್ದಿತ್ತು. ಈಗ 'ಯಾರದು' ಎಂಬ ಸಸ್ಪೆನ್ಸ್ ಚಿತ್ರ ಮಾಡುತ್ತಿದ್ದಾರೆ. ಪುತ್ರ ವಿನೋದ್ಗಾಗಿ ಲೀಲಾವತಿ ಈ ಚಿತ್ರವನ್ನು ನಿರ್ಮಿಸುತ್ತಿದ್ದ ಶ್ರೀನಿವಾಸ್ ಕೌಶಿಕ್ ನಿರ್ಮಿಸುತ್ತಿದ್ದಾರೆ.
ಮಲೆನಾಡಿನ ಕೆಲವು ಭಾಗಗಳಲ್ಲಿ ಚಿತ್ರೀಕರಣ ನಡೆಸಿದ ನಂತರ ಇದೀಗ ಚಿತ್ರಕ್ಕೆ ಬೆಂಗಳೂರು ಹೊರ ವಲಯದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಕೌರವ ವೆಂಕಟೇಶ್ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶ ಸಂಯೋಜಿಸಲಾಗಿದೆ. ನಾಗೇಶ್ ಆಚಾರ್ಯ ಛಾಯಾಗ್ರಹಣ ಹಾಗೂ ಅಖಿಲ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಲೀಲಾವತಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ |
| |
|
|
|
|
|
|
|