|
| 'ವೀರಮದಕರಿ'ಗೆ ಪತ್ರಕರ್ತರಿಲ್ಲದ ಪತ್ರಿಕಾಗೋಷ್ಠಿ |
| ಬುಧವಾರ, 7 ಜನವರಿ 2009 ( 18:43 IST ) | |
ಸುದೀಪ್ ನಿರ್ದೇಶಿಸಿ ನಟಿಸಿದ 'ವೀರಮದಕರಿ' ಚಿತ್ರದ ಬಗ್ಗೆ ಹೆಚ್ಚು ವಿಶ್ವಾಸವಿಟ್ಟಿದ್ದಾರೆ. ದಿನೇಶ್ ಗಾಂಧಿ ನಿರ್ಮಾಣದ ಚಿತ್ರದ ನಿರ್ದೇಶನ ಜವಾಬ್ದಾರಿಯನ್ನು ಕೊನೆಗೆ ಸ್ವತಃ ಸುದೀಪ್ ವಹಿಸಿಕೊಂಡರು. ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ಇತ್ತೀಚೆಗೆ ಏಟ್ರಿಯಾ ಹೊಟೇಲ್ನಲ್ಲಿ ನಡೆಯಿತಾದರೂ ಅದು ಅಧ್ವಾನವಾಗಿತ್ತು.
ದಿನೇಶ್ ಗಾಂಧಿ ಸಂಜೆ ಪತ್ರಿಕಾಗೋಷ್ಠಿ ಇರುವುದರ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದರು. ಪತ್ರಕರ್ತರೆಲ್ಲ ರಾಮು ನಿರ್ಮಾಣದ 'ಗುಲಾಮ'ಚಿತ್ರ ವೀಕ್ಷಿಸಿ ಅಲ್ಲಿಗೆ ಹೋಗುವಷ್ಟರಲ್ಲಿ ದಿನೇಶ್ ಗಾಂಧಿ ಮಾತು ಮುಗಿಸುತ್ತಿದ್ದರು. ಪತ್ರಕರ್ತರು ಸರಿಯಾದ ಸಮಯಕ್ಕೆ ಹೋದರೂ ಅವರು ಮಾತ್ರ ಮುಂಚಿತವಾಗಿ ಪತ್ರಿಕಾಗೋಷ್ಠಿ ಮಾಡಿದ್ದರು. ಅದು ಪತ್ರಕರ್ತರಿಲ್ಲದೆ.
ಈ ಬಗ್ಗೆ ದಿನೇಶ್ ಗಾಂಧಿಯನ್ನು ಪ್ರಶ್ನಿಸಿದರೆ ಸರಿಯಾದ ಉತ್ತರ ಕೊಡಲಿಲ್ಲ. ಕೊನೆಗೆ ಸುದೀಪ್ರನ್ನು ಕೇಳಿದರೆ ಅವರು ಅಷ್ಟೇ ಜವಾಬ್ದಾರಿಯಿಂದ ನುಣುಚಿಕೊಂಡರು. ಈ ರೀತಿ ಕಾಟಾಚಾರಕ್ಕೆ ಪತ್ರಿಕಾಗೋಷ್ಠಿ ಮಾಡುವ ಅಗತ್ಯವಾದರು ಇದೆಯೇ? ಪತ್ರಕರ್ತರೇನು ಪತ್ರಿಕಾಗೋಷ್ಠಿ ಮಾಡಿ ಎಂದು ಬೇಡುತ್ತಾರಾ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದಲ್ಲಿ ಚಿತ್ರ ನಿರ್ಮಿಸಿ ಹಣ ಗಳಿಸಬೇಕೆಂದು ತೆಲುಗಿನಿಂದ ಬಂದ ಆದಿತ್ಯ ಬಾಬುಗೆ ಯಾಕೋ ಕನ್ನಡ ಜನ ಕೈ ಹಿಡಿಯುವ ಲಕ್ಷಣಗಳು ಕಾಣುತ್ತಿಲ್ಲ. ಇವರು ನಿರ್ಮಾಪಕ ಹಾಗೂ ನಾಯಕನಾಗಿ ನಟಿಸಿದ 'ಅಂತೂ ಇಂತು ಪ್ರೀತಿ |
| |
|
|
|
|
|
|
|