|
| ಅದೃಷ್ಟದ ನಿರೀಕ್ಷೆಯಲ್ಲಿ ಮೆಂಟಲ್ ಮಂಜ |
| ಗುರುವಾರ, 27 ನವೆಂಬರ್ 2008 ( 16:24 IST ) | |
'ಮೆಂಟಲ್ ಮಂಜ'ನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಅರ್ಜುನ್ ಈಗ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅದು ಮೂರನೇ ಕ್ಲಾಸ್ ಮಂಜನಾಗಿ. ಅವರ ಹೊಸ ಚಿತ್ರ 'ಮೂರನೇ ಕ್ಲಾಸ್ ಮಂಜ ಬಿ.ಕಾಂ ಭಾಗ್ಯ' ಚಿತ್ರ ಮುಂದಿನ ತಿಂಗಳು ತೆರೆಕಾಣಲಿದೆ.
ನಿರ್ಮಲವಾದ ಪ್ರೀತಿಗೆ ವಿದ್ಯೆ ಮುಖ್ಯವಲ್ಲ ಎಂಬ ಸಂದೇಶ ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕ ಸಾಯಿಸಾಗರ್. ಖ್ಯಾತ ಜಾನಪದ ಗಾಯಕ ಆಲೂರು ನಾಗಪ್ಪ ಚಿತ್ರದಲ್ಲಿ ಒಂದು ಹಾಡು ಹಾಡಿದ್ದಾರೆ. ಅಶ್ವಿನಿ ಮತ್ತು ಸುನೀತ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.
ವೆಂಕಟ್-ನಾರಾಯಣ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರದ ಮೂಲಕ ಕ್ಲಾಸ್ ಪ್ರೇಕ್ಷಕರನ್ನು ತಲುಪುವುದು ನಟ ಅರ್ಜುನ್ ಅವರ ಮತ್ತೊಂದು ಗುರಿ. ಈ ಹಿಂದೆ ನಿರ್ದೇಶಕ ಸಾಯಿಸಾಗರ್ ಹಾಗೂ ಅರ್ಜುನ್ ಜೊತೆಯಾಗಿ ಮಾಡಿದ ಲಿತಿಮ್ಮಳಿ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಗೆಲ್ಲಲಿಲ್ಲ. ಆದರೆ ಅದರಲ್ಲಿನ ಸರೋಜದೇವಿಯವರ ಕ್ಲೈಮ್ಯಾಕ್ಸ್ ದೃಶ್ಯವನ್ನು ಮಾತ್ರ ಜನ ಮೆಚ್ಚಿದ್ದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಇದೊಂದು ಪಕ್ಕಾ ಲವ್ ಸ್ಟೋರಿ. ಸದಾಶಿವನಗರದ ಹುಡುಗಿ. ಶ್ರೀರಾಂಪುರ ಹುಡುಗ. ಇಬ್ಬರ ನಡುವೆ ಪ್ರೀತಿ ಶುರುವಾಗುತ್ತದೆ. ಆ ಪ್ರೀತಿ ಹೇಗಿರುತ್ತದೆ ಎಂಬುದನ್ನು ಊಹಿಸಿಕೊಳ್ಳಿ. ನಾನು ಕಥೆ ಮಾಡುವಾಗ ಕಲ್ಪನೆ |
| |
|
|
|
|
|
|
|