|
| ಆರ್ಥಿಕ ಸುಧಾರಣೆ ಹೆಚ್ಚಿಸಲಿದ್ದೇವೆ-ವಿತ್ತ ಸಚಿವ |
| ನವದೆಹಲಿ, ಬುಧವಾರ, 23 ಜುಲೈ 2008 ( 13:35 IST ) | |
ಸರ್ಕಾರದ ಪರವಾಗಿ ಬಂದ ವಿಶ್ವಾಸ ಮತದಿಂದ ಉತ್ತೇಜಿತರಾದಂತೆ ಕಂಡು ಬಂದ ಹಣಕಾಸು ಸಚಿವ ಪಿ.ಚಿದಂಬರಂ, ಸರ್ಕಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಆರ್ಥಿಕ ಸುಧಾರಣೆಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು. ನಮಗೆ 275 ಮತಗಳು ದೊರೆತಿದ್ದು, ಇದು ಅಗತ್ಯವಿದ್ದುದ್ದಕ್ಕಿಂತಲೂ ಹೆಚ್ಚಿನದಾಗಿದೆ. ಇದರಿಂದಾಗಿ ನಾವು ಹೆಚ್ಚಿನ ಮುನ್ನಡೆ ಸಾಧಿಸಲು ಆತ್ಮವಿಶ್ವಾಸ ದೊರೆತಂತಾಗಿದೆ ಎಂದು ಅವರು ತಿಳಿಸಿದರು. ವಿಮೆ ಮತ್ತು ಬ್ಯಾಂಕಿಂಗ್ ವಲಯಗಳ ಒಂದಿಷ್ಟು ತೊಡರುಗಳಿದೆ. ಅದೇ ರೀತಿಯಲ್ಲಿಯೇ ಪಿಂಚಣಿಗೆ ಸಂಬಂಧಪಟ್ಟಂತೆ ಸಮಿತಿಯೊಂದನ್ನು ಸ್ಧಾಪಿಸಿ ಸುಧಾರಣೆಯನ್ನು ತರಲಾಗುವುದು ಎನ್ನುವ ಸೂಚನೆಯನ್ನು ಚಿದಂಬರಂ ತಿಳಿಸಿದರು. ನಾವು ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಯನ್ನು ವಿರೋಧಿಸದ ಸದಸ್ಯರುಗಳನ್ನು ಭೇಟಿ ಮಾಡಿ ಸುಧಾರಣೆಯನ್ನು ಕುರಿತಂತೆ ಚರ್ಚಿಸುತ್ತೇವೆ ಮತ್ತು ಅದರೊಂದಿಗೆ ಮುನ್ನಡೆಯುತ್ತೇವೆ ಎಂದು ಚಿದಂಬರಂ ತಿಳಿಸಿದರು. ಬೃಹತ್ ತಡೆಯಾಗಿದ್ದ ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದವನ್ನು ಸಾಧಿಸಿದ್ದು, ನಾವೀಗ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳನ್ನು ತರುವತ್ತು ಮುನ್ನಡೆಯನ್ನು ಸಾಧಿಸಲಿದ್ದೇವೆ ಎಂದು ತಿಳಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|