|
| ಪ್ರಧಾನಿಗೆ ವಿತ್ತ ಖಾತೆ:ಕಂಪೆನಿಗಳ ಸ್ವಾಗತ |
| ನವದೆಹಲಿ, ಸೋಮವಾರ, 1 ಡಿಸೆಂಬರ್ 2008 ( 13:02 IST ) | |
ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಅವರನ್ನು ಗೃಹಸಚಿವರಾಗಿ ನೇಮಕ ಮಾಡಿ ವಿತ್ತ ಖಾತೆಯನ್ನು ಭಾರತದ ಆರ್ಥಿಕತೆಯಲ್ಲಿ ಸುಧಾರಣೆ ತಂದ ರೂವಾರಿ ಎಂದು ಖ್ಯಾತರಾದ ಪ್ರಧಾನಿ ಮನಮೋಹನ್ ಸಿಂಗ್ ವಹಿಸಿಕೊಂಡಿರುವುದಕ್ಕೆ ದೇಶದ ಕೈಗಾರಿಕೋದ್ಯಮ ಸಂಘಗಳು ಸ್ವಾಗತಿಸಿವೆ.
ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ನೇತೃತ್ವದಲ್ಲಿ ಸಮಿತಿಯೊಂದು ರಚಿಸಿ ಶೇರುಪೇಟೆ ಕುಸಿತ ವಿದೇಶಿ ವಿನಿಮಯ ಇಳಿಕೆ ಕುಸಿತ ಕುರಿತಂತೆ ಆರ್ಥಿಕ ಸವಾಲುಗಳನ್ನು ಎದುರಿಸಲು ಪ್ರಧಾನಿ ಮನಮೋಹನ್ ಸಿಂಗ್ ನಿರ್ಧರಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಹಣಕಾಸು ಇಲಾಖೆಗೆ ಒಳಪಡುವ ಬಡ್ಡಿ ದರ ಇಳಿಕೆ , ಮೂಲಸೌಕರ್ಯಗಳಲ್ಲಿ ಹೆಚ್ಚುತ್ತಿರುವ ವೆಚ್ಚಗಳ ಕುರಿತಂತೆ ನೇರ ಪಾತ್ರ ವಹಿಸಿದ್ದರು ಎಂದು ಫೆಟರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಮಿತ್ ಮಿತ್ರಾ ತಿಳಿಸಿದ್ದಾರೆ.
ಸಂಪುಟದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ವಿತ್ತ ಸಚಿವರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಮತ್ತು ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ.
ಪ್ರಧಾನಿ ಮನಮೋಹನ್ ಸಿಂಗ್ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಕೂಡಾ ಸೇವೆಯನ್ನು ಸಲ್ಲಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|