ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಸತ್ಯಂ ಪರಿಹಾರ ಪ್ರಕರಣ-ಸುಪ್ರೀಂಗೆ ಮೊರೆ: ಮೈತಾಸ್
ನವದೆಹಲಿ, ಬುಧವಾರ, 20 ಮೇ 2009   ( 18:13 IST )
ಮಹಾ ವಂಚನೆ ಎಸಗಿದ ಸತ್ಯಂ ಕಂಪೆನಿಯಿಂದ 4,975ಕೋಟಿ ರೂಪಾಯಿ ಪರಿಹಾರ ಹಣ ದೊರಕಿಸಿಕೊಡುವಂತೆ ಮೈತಾಸ್ ಟಚ್ ಇನ್ವೆಸ್ಟರ್ಸ್ ಅಸೋಸಿಯೇಶನ್(ಎಂಟಿಐಎ)ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ಗ್ರಾಹಕ ಆಯೋಗ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ, ಈ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಎಂಟಿಐಎ ತಿಳಿಸಿದೆ.

ಪರಿಹಾರ ಹಣ ದೊರಕಿಸಿರುವ ನಿಟ್ಟಿನಲ್ಲಿ ಸಲ್ಲಿಸಿದ್ದ ಮನವಿಯ ತಿರಸ್ಕರಿಸಿರುವ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಾವು ನಿರ್ಧರಿಸಿರುವುದಾಗಿ ಎಂಟಿಐಎನ ನಿರ್ದೇಶಕ ವೀರೇಂದ್ರ ಜೈನ್ ಹೇಳಿದರು.

ಸತ್ಯಂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಧನ ಒದಗಿಸುವ ಕೊಡುವ ಸಾಮರ್ಥ್ಯ ಆಯೋಗಕ್ಕೆ ಇಲ್ಲ ಎಂದು ಈ ಮೊದಲು ಅಭಿಪ್ರಾಯ ವ್ಯಕ್ತಪಡಿಸಿ, ಈ ಪ್ರಕರಣ ಇದೀಗ ಸಿಬಿಐ ಸುಪರ್ದಿಯಲ್ಲಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಂ ಸಂಸ್ಥಾಪಕ ಬಿ.ರಾಮಲಿಂಗಾ ರೆಡ್ಡಿ, ಸಹೋದರ ಬಿ.ರಾಮರಾಜು ಸೇರಿದಂತೆ ಒಂಬತ್ತು ಮಂದಿ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿದೆ.

ಮೈತಾಸ್ ಪರಿಹಾರಕ್ಕಾಗಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಅದು ಗ್ರಾಹಕ ರಕ್ಷಣಾ ಕಾಯ್ದೆ,1986ರಕ್ಕೂ ಅನ್ವಯ ಆಗುತ್ತಿಲ್ಲ. ಆ ಕಾರಣದಿಂದಾಗಿ ಅರ್ಜಿಯನ್ನು ವಜಾಗೊಳಿಸಿರುವುದಾಗಿ ಆಯೋಗದ ಜಸ್ಟೀಸ್ ಕೆ.ಎಸ್.ಗುಪ್ತಾ ಹಾಗೂ ರಾಜ್ಯಲಕ್ಷ್ಮಿರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮೆಲ್‌ಸ್ಟಾರ್ ಐಟಿ ಯಶ್ ಬಿರ್ಲಾ ಕಂಪೆನಿಗೆ ತೆಕ್ಕೆಗೆ
3ರೂ.ಗೆ ಅಕ್ಕಿ-ಬೇಡಿಕೆ ಈಡೇರಿಕೆಗೆ 1ಲಕ್ಷ ಕೋಟಿ ರೂ.ಬೇಕು!
ಮಾರುತಿ-800 ಅತ್ಯಾಧುನೀಕರಣ: ಮಾರುತಿ ಸುಜುಕಿ
ಆರಂಭಿಕ ವಹಿವಾಟು: 220 ಅಂಕ ಕುಸಿದ ಸೂಚ್ಯಂಕ
ಎಸ್ಸಾರ್ ತೈಲ ಕಂಪೆನಿಗೆ 455ಕೋಟಿ ರೂ.ನಷ್ಟ
'ಮಹಾವಂಚನೆ' ತನಿಖೆಗೆ ಅಮೆರಿಕ ಕಾಂಗ್ರೆಸ್ ಅನುಮತಿ
ಗ್ರಹ ಗತಿ
ದೈನಿಕ - ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕೇಂದ್ರ ಸರ್ಕಾರದ ಮುಂದಿಡುವ ಕಾಫಿ ಪ್ಯಾಕೇಜನ್ನು ತಕ್ಷಣ ಜಾರಿಗೆ ತರುವಂತೆ ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ಬಿ. ಚಂದ್ರೇಗೌಡ
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಮನರಂಜನೆ
ಚಿತ್ರ ಸುದ್ದಿ - ಕನ್ನಡದಲ್ಲಿ ಈ ವಾರ ಸ್ಟಾರ್ ವಾರ್. ದೊಡ್ಡ ನಟರ ಎರಡು ಚಿತ್ರಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿದೆ. ಇದರಿಂದ ಸಹಜವಾಗಿಯೇ ಪ್ರೇಕ್ಷಕರ ಪ್ರತಿಕ್ರಿಯೆ ಯಾವ ಚಿತ್ರಕ್ಕೆ ಹೇಗಿರುತ್ತದೆ ಎಂಬುದು
ಮುಂದೆ ಓದಿ|ಮತ್ತಷ್ಟು...