|
| ಸಿಆರ್ಪಿಎಫ್ ವಿರುದ್ಧ ಮಾಯಾ ಆರೋಪ |
| ಲಕ್ನೋ (ಏಜೆನ್ಸಿ), 2 ಜನವರಿ 2008 ( 09:26 IST ) | |
ಉತ್ತರಪ್ರದೇಶ ರಾಮ್ಪುರದ ಸಿಆರ್ಪಿಎಫ್(ಕೇಂದ್ರ ಮೀಸಲು ಪಡೆ)ನ ಶಿಬಿರದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಸಿಆರ್ಪಿಎಫ್ ರಾಜ್ಯ ಸರಕಾರದ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿದ್ದೆ ಕಾರಣ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಆರೋಪಿಸಿದ್ದಾರೆ.
ರಾಮ್ಪುರದ ಜಿಲ್ಲಾಧಿಕಾರಿಗಳು ಸಿಆರ್ಪಿಎಫ್ ಅಧಿಕಾರಿಗಳನ್ನು ಭೇಟಿ ಮಾಡಿ ಸಂಭಾವ್ಯ ದಾಳಿಗಳನ್ನು ಎದುರಿಸಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದರು.
ಆದರೂ, ಮಂಗಳವಾರ ಶಿಬಿರದ ಮೇಲೆ ದಾಳಿ ನಡೆದಿರುವುದು ಸಿಆರ್ಪಿಎಫ್ನ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಮಾಯಾವತಿ ಖಾರವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ಪುರ್ ಸಿಆರ್ಪಿಎಫ್ (ಕೇಂದ್ರೀಯ ಮೀಸಲು ಪಡೆ) ಕ್ಯಾಂಪ್ ಮೇಲೆ ಮಂಗಳವಾರ ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ ಏಳು ಮಂದಿ ಜವಾನರು ಹಾಗೂ ಒಬ್ಬ ನಾಗರಿಕ ಸೇರಿದಂತೆ 8 ಮಂದಿ ಬಲಿಯಾಗಿದ್ದರು.
ಲಷ್ಕರ್-ಎ-ತೋಯ್ಬಾದ ಉಗ್ರರು ಬೆಳಗಿನ ಜಾವದ 3 ಗಂಟೆ ಸುಮಾರಿಗೆ ಏಕಾಏಕಿ ಕ್ಯಾಂಪ್ನತ್ತ ಗುಂಡು ಹಾರಿಸಿದ ಪರಿಣಾಮ ಈ ದುರಂತ ಸಂಭವಿಸಿತ್ತು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|