|
| ಎಡಪಕ್ಷಗಳ ಬೆಂಬಲವಿರದಿದ್ದರೂ ಸರಕಾರ ಸುಭದ್ರ-ಪಾಸ್ವಾನ್ |
| ನ್ಯೂಯಾರ್ಕ್, ಶುಕ್ರವಾರ, 4 ಜುಲೈ 2008 ( 12:32 IST ) | |
ವಿವಾದಾತ್ಮಕವಾದ ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಎಡಪಕ್ಷಗಳು ಯುಪಿಎ ಸರಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದರೂ ಸರಕಾರ ಸುಭದ್ರವಾಗಿರುತ್ತದೆ ಎಂದು ಲೋಕಜನಶಕ್ತಿ ಪಕ್ಷದ ನಾಯಕ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.
ಯುಪಿಎ ಸರಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.ಯಾವುದೇ ಬೆದರಿಕೆ ಎದುರಾಗುವುದಿಲ್ಲ ಎನ್ನುವುದು ನನ್ನ ಆಶಾಭಾವನೆಯಾಗಿದೆ.ಅಣು ಒಪ್ಪಂದ ದೇಶದ ಹಿತಾಸಕ್ತಿಗೆ ಅಗತ್ಯವಾಗಿದ್ದರಿಂದ ಸರಕಾರವನ್ನು ಅಭದ್ರಗೊಳಿಸುವ ಅಗತ್ಯವಿಲ್ಲ ಎಂದು ಪಾಸ್ವಾನ್ ಹೇಳಿದ್ದಾರೆ.
ಭಾರತದ ದಲಿತರು ಹಾಗೂ ಅಲ್ಪ ಸಂಖ್ಯಾತರ ಅಂತಾರಾಷ್ಟ್ರೀಯ ಸಮ್ಮೆಳನದಲ್ಲಿ ಮಾತನಾಡಿದ ಅವರು ಅಣು ಒಪ್ಪಂದ ಜಾರಿಗೊಳಿಸಲು ಪ್ರಧಾನ ಮಂತ್ರಿ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳಿಗೆ ಬದ್ದರಾಗಿರುವುದಾಗಿ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿಯವರಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಪಾಸ್ವಾನ್ ಹೇಳಿದರು.
ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಎಡಪಕ್ಷಗಳು ತೆಗೆದುಕೊಳ್ಳುತ್ತಿರುವ ನಿರ್ಣಯಗಳಿಗೆ ತಾವು ವಿರುದ್ದವಾಗಿದ್ದು ,ಮಾತುಕತೆಯ ಮೂಲಕ ಅಣು ಒಪ್ಪಂದದ ವಿಷಯವನ್ನು ಬಗ್ಗೆ ಎಡಪಕ್ಷಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಹುಜನ ಸಮಾಜ್ ಪಕ್ಷದ ನಾಯಕಿ ಉತ್ತರ ಪ್ರದೇಶದ ನಾಯಕಿ ಮಾಯವತಿಯವರನ್ನು ಟೀಕಿಸಿದ ಪಾಸ್ವಾನ್ ಅವಳೊಬ್ಬ ಅವಕಾಶವಾದಿ ರಾಜಕಾರಣಿ,ಸ್ವಾರ್ಥಕ್ಕಾಗಿ ಇತರ ಪಕ್ಷಗಳನ್ನು ಬೆದರಿಸುವು ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|