|
| ಎಲ್ಲ ಸದಸ್ಯರು ಸರ್ಕಾರದ ಪರ: ಅಮರ್ ಸಿಂಗ್ |
| ನವದೆಹಲಿ, ಮಂಗಳವಾರ, 8 ಜುಲೈ 2008 ( 16:59 IST ) | |
ಭಾರತ-ಅಮೆರಿಕ ಪರಮಾಣು ಒಪ್ಪಂದದ ಬಗ್ಗೆ ಯುಪಿಎಗೆ ಬೆಂಬಲ ನೀಡುವ ಕುರಿತು ಸಮಾಜವಾದಿ ಪಕ್ಷದಲ್ಲಿ ಅತೃಪ್ತಿ ಮೂಡಿದೆ ಎಂಬ ಶಂಕೆಗಳನ್ನು ತಳ್ಳಿಹಾಕಿರುವ ಪಕ್ಷದ ಪ್ರಧಾನಕಾರ್ಯದರ್ಶಿ ಅಮರ್ ಸಿಂಗ್ ಇಡೀ ಪಕ್ಷವು ಸರ್ಕಾರದ ಪರವಾಗಿ ಮತ ಚಲಾಯಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಎಲ್ಲ 39 ಸಮಾಜವಾದಿ ಪಕ್ಷದ ಸಂಸದರು ಸರ್ಕಾರದ ಪರವಾಗಿ ಇದ್ದಾರೆ. ಸಮಾಜವಾದಿ ಪಕ್ಷದ ಪ್ರತಿಯೊಂದು ಮತವು ಭಾರತ-ಅಮೆರಿಕ ಅಣುಒಪ್ಪಂದಕ್ಕೆ ಮತ್ತು ಸರ್ಕಾರವನ್ನು ಉಳಿಸಲು ಬೆಂಬಲಿಸಲಿದೆ ಎಂದು ಅಮರ್ ಸಿಂಗ್ ಹೇಳಿದರು. ಆದಾಗ್ಯೂ, ಅಣುಒಪ್ಪಂದದ ಬಗ್ಗೆ ಪಕ್ಷದಲ್ಲಿ ಕೆಲವು ಭಿನ್ನಾಭಿಪ್ರಾಯಗಳಿವೆ ಎಂದು ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಒಪ್ಪಿಕೊಂಡಿದ್ದಾರೆ.
ನಮ್ಮಲ್ಲಿದ್ದ ಆವರಿಸಿದ್ದ ಶಂಕೆಗಳು ನಿವಾರಣೆಯಾಗಿದೆ. ರಾಷ್ಟ್ರಕ್ಕೆ ಕೋಮುವಾದಿ ಬೆದರಿಕೆ ಬಗ್ಗೆ ಪ್ರಸಕ್ತ ರಾಜಕೀಯ ಸ್ಥಿತಿಗತಿ ಕುರಿತು ಕೂಡ ಚರ್ಚಿಸಲಾಯಿತು ಎಂದು ಅವರು ನುಡಿದರು. ಎಡಪಕ್ಷಗಳು ಕೋಮುವಾದಿ ಶಕ್ತಿಗಳ ಜತೆ ಕೈಗೂಡಿಸುವುದಿಲ್ಲ ಎಂದು ಮುಲಾಯಂ ಮತ್ತು ಅಮರ್ ಸಿಂಗ್ ಆಶಾವಾದ ವ್ಯಕ್ತಪಡಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|