|
| ಒಪ್ಪಂದದ ಹಿಂದೆ ಒಪ್ಪಂದ: ಆಡ್ವಾಣಿ |
| ನವದೆಹಲಿ, 9 ಜುಲೈ 2008 ( 08:55 IST ) | |
ಹೊಸ ಮೈತ್ರಿಗಳ ನಾಯಕರನ್ನು ರಕ್ಷಿಸುವುದರೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅವುಗಳತ್ತ ನೋಡುತ್ತಿದ್ದು, ಅಣು ಒಪ್ಪಂದದ ಹಿಂದೆ ಒಪ್ಪಂದವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಎಲ್ ಕೆ ಆಡ್ವಾಣಿ, ಈ ವಿಷಯವಾಗಿ ಸ್ಪಷ್ಟನೆ ನೀಡುವಂತೆ ಪ್ರಧಾನಿಗೆ ಕರೆ ನೀಡಿದರು.
ಯಾವುದೋ ನಾಚಿಕೆಗೇಡಿನ ಅಂಶ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ನಡುವಿನ ಗತಕಾಲದ ಕಹಿ ಸಂಬಂಧವನ್ನು ಒಮ್ಮಿಂದೊಮ್ಮೆಗೆ ಸಿಹಿಯಾಗಿ ಪರಿವರ್ತಿಸಿರುವ ಬಗ್ಗೆ ಊಹಾಪೋಹಗಳು ವಿಸ್ತೃತವಾಗಿ ಹಬ್ಬಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಈ ವಿಷಯವಾಗಿ ಯಾವುದೇ ಕೊಡು ಕೊಳ್ಳುವಿಕೆ ನಡೆದಿಲ್ಲ ಎಂಬುದರ ಬಗ್ಗೆ ಪ್ರಧಾನ ಮಂತ್ರಿಯವರು ರಾಷ್ಟ್ರಕ್ಕೆ ಭರವಸೆ ನೀಡಬೇಕು. ಆರ್ಥಿಕ ಅಪರಾಧ ಮತ್ತು ಹಣಕಾಸು ಅವ್ಯನಸ್ಥೆಯ ಪ್ರಕರಣಗಳಲ್ಲಿ ನಿರ್ಧಿಷ್ಟ ವ್ಯಕ್ತಿಯನ್ನು ರಕ್ಷಿಸಲು ಸರಕಾರಿ ಸಂಸ್ಥೆಯನ್ನು ದುರ್ಬಳಕೆ ಮಾಡಲಾಗುತ್ತಿಲ್ಲ ಎಂಬುದನ್ನು ಪ್ರಧಾನಿ ಖಚಿತ ಪಡಿಸಬೇಕು ಎಂದು ಆಗ್ರಹಿಸಿದರು.
ಅಣು ಒಪ್ಪಂದ ಹಿಂದೆ ಯಾವುದೇ ಒಪ್ಪಂದ ಇಲ್ಲ ಎಂದು ಸ್ಪಷ್ಟ ಪಡಿಸಿರುವ ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್, ಪಕ್ಷ ಯಾವುದೇ ಸಚಿವ ಸ್ಥಾನದತ್ತ ಒಲವು ಹೊಂದಿಲ್ಲ ಎಂದು ತಿಳಿಸಿದ್ದಾರೆ. ತನ್ನ ನಾಯಕರನ್ನು ಭ್ರಷ್ಟಾಚಾರ ಪ್ರಕರಣದಿಂದ ರಕ್ಷಿಸಲುಸಮಾಜವಾದಿ ಪಕ್ಷ ಕಾಂಗ್ರೆಸ್ ಜತೆ ಹೊಂದಾಣಿಗೆ ಮಾಡಿಕೊಂಡಿದೆ ಎಂಬ ಶಂಕೆ ರಾಜಕೀಯ ವರ್ತುಲದಲ್ಲಿ ವ್ಯಾಪಕವಾಗಿ ಹಬ್ಬಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|