|
| ಯುಪಿಎ ವಿರುದ್ಧ ಪಕ್ಷೇತರ ನಾಗಪಾಲ್ ಮತ |
| ನವದೆಹಲಿ, ಗುರುವಾರ, 17 ಜುಲೈ 2008 ( 18:51 IST ) | |
ಯುಪಿಎಗೆ ವಿಶ್ವಾಸ ಮತ ಯಾಚನೆಯ ಕಠಿಣ ಅಗ್ನಿಪರೀಕ್ಷೆ ಎದುರಾಗಿರುವ ಸಂಕೇತವಾಗಿ, ಆಡಳಿತಾರೂಢ ಸಮ್ಮಿಶ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದ ಉತ್ತರಪ್ರದೇಶದ ಪಕ್ಷೇತರ ಸದಸ್ಯ ಹರೀಶ್ ನಾಗಪಾಲ್ ಪ್ರತಿಪಕ್ಷದ ಪಾಳೆಯಕ್ಕೆ ಸ್ಥಳಾಂತರಗೊಂಡಿದ್ದಾರೆ.
ಇಲ್ಲಿನ ಬಿಜೆಪಿ ಮುಖ್ಯಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮ್ರೋಹಾದ ಪಕ್ಷೇತರ ಅಭ್ಯರ್ಥಿ ಹರೀಶ್ ನಾಗಪಾಲ್ ಯುಪಿಎ ಕೂಟವನ್ನು ವಿರೋಧಿಸುವ ನಿರ್ಧಾರವನ್ನು ಪ್ರಕಟಿಸಿದರು. ಗಗನಕ್ಕೇರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರದ ವಿಫಲತೆ ಮತ್ತು ಅಣುಒಪ್ಪಂದ ಕುರಿತು ಪಾರದರ್ಶಕ ನಿಲುವು ಇಲ್ಲದಿರುವುದು ತಾನು ಈ ನಿರ್ಧಾರ ಕೈಗೊಳ್ಳಲು ಪ್ರೇರೇಪಿಸಿತು ಎಂದು ನಾಗಪಾಲ್ ಹೇಳಿದರು.
2007ರಲ್ಲಿ ಗಾಜಿಯಾಬಾದ್ನಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಉತ್ತರಪ್ರದೇಶ ವಿಧಾನಸಭೆಗೆ ಸ್ಪರ್ಧಿಸಿ ಅವರು ಸೋತಿದ್ದರು. ನಾಗಪಾಲ್ ನಿರ್ಧಾರವನ್ನು ಪ್ರಕಟಿಸಿರುವ ಬಿಜೆಪಿಯ ಹಿರಿಯ ನಾಯಕ ಎಂ. ವೆಂಕಯ್ಯ ನಾಯ್ಡು, ಬಿಜೆಪಿ ಜತೆ ಕೆಲಸ ಮಾಡಲು ಬಯಸಿರುವುದಾಗಿ ಹೇಳಲು ಅವರ ನಮ್ಮನ್ನು ಸಂಪರ್ಕಿಸಿದ್ದರೆಂದು ತಿಳಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಸಂಧಾನಕ್ಕೆ ಸಾಧ್ಯವಾಗದ ವಿಷಯವೊಂದು ನಿಮ್ಮ ಕಾರ್ಯವನ್ನು ತ್ರಾಸದಾಯಕವಾಗಿಸಬಹುದು. ನಿಮ್ಮ ವಿರೋಧಿಗಳು ಮತ್ತು ಕಚೇರಿ ಸಹವರ್ತಿಗಳೂ ಕೂಡ ನಿಮ್ಮ ನೈತಿಕ ಬಲವನ್ನು ಒಪ್ಪಿಕೊಳ್ಳುತ್ತಾರೆ. ಅನಿರೀಕ್ಷಿತ ಕ್ಷೇತ್ರಗಳಿಂದ ಸಾಲದ ನೆರವು ನೀವು ಪಡೆಯಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|