|
| ವಿಶ್ವಾಸಮತದಲ್ಲಿ ಪಪ್ಪುಯಾದವ್ |
| ನವದೆಹಲಿ, ಶುಕ್ರವಾರ, 18 ಜುಲೈ 2008 ( 13:36 IST ) | |
ವಿವಾದಾತ್ಮಕ ಲೋಕಸಭಾ ಸದಸ್ಯನಾಗಿರುವ ಆರ್ಜೆಡಿ ಪಕ್ಷದ ಪಪ್ಪು ಯಾದವ್ಗೆ ವಿಶ್ವಾಸ ಮತದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಈತನಿಗೆ ದೆಹಲಿ ನ್ಯಾಯಾಲಯ ಈ ಅನುಮತಿಯನ್ನು ನೀಡಿದೆ.
ಯಾದವ್, 1998ರ ಜೂನ್ 14 ರಂದು ನಡೆದ ಸಿಪಿಐ(ಎಂ), ಎಂಎಲ್ಎ ಅಜಿತ್ ಸರ್ಕಾರ್ ಅವರ ಕೊಲೆ ಪ್ರಕರಣದಲ್ಲಿ ದೋಷಿಯನ್ನಾಗಿಸಿ ಶಿಕ್ಷೆಯನ್ನು ವಿಧಿಸಲಾಗಿತ್ತು. ವಿಶ್ವಾಸಮತದಲ್ಲಿ ಪಾಲ್ಗೊಳ್ಳುವ ಕುರಿತಾದ ಮನವಿಯನ್ನು ಯಾದವ್ ಅವರ ವಕೀಲರು ಕೋರ್ಟ್ಗೆ ಸಲ್ಲಿಸಿದ್ದರು. ಅವರು ಇದರಲ್ಲಿ, ಯಾದವ್ ಈ ಮುನ್ನ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಭಾಗವಹಿಸಿದ್ದುದ್ದನ್ನು ಉಲ್ಲೇಖಿಸಿದ್ದರು.
ಎಲ್ಲಾ ವಿವರಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಜಿ.ಎಸ್.ಗಿಸ್ತಾನಿ ಅವರು ಜುಲೈ 22ರಂದು ನಡೆಯುವ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ಭಾಗವಹಿಸಲು ಅನುಮತಿ ನೀಡಿದರು.
ಕೋರ್ಟು ಬಿಹಾರದ ಮೇಧಾಪುರದ ಈ ಸಂಸತ್ ಸದಸ್ಯನಿಗೆ ಸೂಕ್ತವಾದ ಭದ್ರತಾ ವ್ಯವಸ್ಥೆ ಏರ್ಪಡಿಸುವಂತೆ ಜೈಲಿನ ಸಿಬ್ಬಂದಿಗೆ ನಿರ್ದೇಶನವನ್ನು ನೀಡಿದೆ.
ರಾಜೇಶ್ ರಂಜನ್ ಅಲಿಯಾಸ್ ಪಪ್ಪುಯಾದವ್ 2005 ಫೆಬ್ರವರಿವರೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಈ ವರ್ಷ ಫೆಬ್ರವರಿ 14ರಂದು ಆತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಮೇಧಾಪುರಕ್ಕೆ ವರ್ಗಾಯಿಸಲಾಗಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|