|
| ಅಹಮದಾಬಾದ್ ಬಂದ್ ಬೆಂಬಲಿಸಿದ ಕಾಂಗ್ರೆಸ್ |
| ಅಹಮದಾಬಾದ್, ಶುಕ್ರವಾರ, 18 ಜುಲೈ 2008 ( 13:48 IST ) | |
ಅಹಮದಾಬಾದ್ನ ಅನೇಕ ಭಾಗಗಳಲ್ಲಿ ಇನ್ನೂ ಬಿಗುವಿನ ವಾತಾವರಣ ಮುಂದುವರೆದಿದೆ.ಆಸರಾಮ್ ಬಾಪೂ ಆಶ್ರಮದಲ್ಲಿ ನಿಗೂಢವಾಗಿ ಸಂಭವಿಸಿರುವ ಇಬ್ಬರು ಬಾಲಕರ ಸಾವು ಬಂದ್ಗೆ ಕಾರಣವಾಗಿದೆ. ಜವಳಿ ನಗರವೆಂದೇ ಹೆಸರಾಗಿರುವ ಅಹಮದಾಬಾದ್ನ ನಾಗರೀಕರು ಈ ಕೃತ್ಯವನ್ನು ಖಂಡಿಸಿ ನೀಡಿರುವ ಬಂದ್ ಕರೆಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ.
ಸಬರಮತಿಯ ಬಾಪೂ ಆಶ್ರಮ ಗುರುಕುಲದಲ್ಲಿ ಸಂಭವಿಸಿರುವ ಇಬ್ಬರು ವಿದ್ಯಾರ್ಥಿಗಳ ಸಾವು ಅಹಮದಾಬಾದ್ನಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಘರ್ಷಣೆ ನಡೆದಿದೆ.
ಆಶ್ರಮದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಮಾರು 11 ವರ್ಷದ ಆಸುಪಾಸಿನ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಕಾಣೆಯಾದರು. ಆ ನಂತರ ಆ ವಿದ್ಯಾರ್ಥಿಗಳ ಮೃತದೇಹವು ಸಬರಮತಿ ನದಿ ದಡದಲ್ಲಿ ಕಾಣಿಸಿಕೊಂಡಿತ್ತು.
ವಿದ್ಯಾರ್ಥಿಗಳ ಪೋಷಕರು ಮತ್ತು ಇತರ ಅನೇಕ ಮಂದಿ, ಆಶ್ರಮದಲ್ಲಿ ಈ ಮಕ್ಕಳನ್ನು ಧಾರ್ಮಿಕ ಕಾರಣಗಳಿಗಾಗಿ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಈ ಬಗ್ಗೆ ತಿಳಿಸಿ, ಗುಜರಾತ್ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|