|
| ಉಗ್ರರ ನುಸುಳು ಯತ್ನ ವಿಫಲ; ಓರ್ವ ಉಗ್ರ ಹತ್ಯೆ |
| ಜಮ್ಮು, ಶನಿವಾರ, 11 ಅಕ್ಟೋಬರ್ 2008 ( 13:59 IST ) | |
ಭಾರತೀಯ ಸೇನೆ ಒರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿನ ನಿಯಂತ್ರಣ ರೇಖೆಯಲ್ಲಿನ ನುಸುಳು ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ತಡ ರಾತ್ರಿ ಪೂಂಚ್ ಜಿಲ್ಲೆಯಲ್ಲಿನ ಸಾಬ್ರಾ ಗಲಿಯಲ್ಲಿ ಪಾಕ್ನ ಎಲ್ಒಸಿ ಕಡೆಯಿಂದ ಸುಮಾರು 5 ಉಗ್ರರ ಗುಂಪು ಭಾರತ ಭೂಪ್ರದೇಶದೊಳಕ್ಕೆ ನುಸುಳಿತು. ಇದನ್ನು ಅರಿತ ಸೇನೆ ಅವರ ವಿರುದ್ಧ ಗುಂಡಿನ ದಾಳಿ ನಡೆಸಿದರು.
ಓರ್ವ ನುಸುಳುಕೋರ ಕೋಲೆಗೀಡಾದರೆ, ಇತರರು ಪಾಕ್ ಕಡೆ ಓಡಿ ಹೋಗುವಲ್ಲಿ ಸಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ತ ನುಸುಳುಕೋರ ಪಾಕಿಸ್ತಾನದ ರಾಡ್ನ ನಿವಾಸಿ ಎಂದು ಗುರುತಿಸಲಾಗಿದೆ.
ಭಾರತೀಯ ಪ್ರದೇಶದೊಳಕ್ಕೆ ನುಸುಳಲು ಎಲ್ಒಸಿಯ ಕೆಲ ಸ್ಥಳಗಳಲ್ಲಿ ಮುಳ್ಳಿನ ಬೇಲಿಗಳನ್ನು ತುಂಡರಿಸಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|