|
| ಬೌದ್ಧ ಧರ್ಮಕ್ಕೆ 10,000 ದಲಿತರ ಮತಾಂತರ |
| ಭೂಪಾಲ್, ಶನಿವಾರ, 11 ಅಕ್ಟೋಬರ್ 2008 ( 19:23 IST ) | |
ಬುದ್ಧ ಜಯಂತಿಯ ದಿನವಾದ ಶುಕ್ರವಾರ ಮಧ್ಯಪ್ರದೇಶದ ಪುಕಾರಣ್ಯ ಗ್ರಾಮ ಸಮೀಪದ ಕಾನ್ಪುರದಲ್ಲಿ ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ಮಾತಾ ಪ್ರಸಾದ್, ಆಚಾರ್ಯ ಸಂದೇಶ್ ಭಾಲೆಕಾರ್ ಸೇರಿದಂತೆ ಹಲವು ಬೌದ್ಧ ಭಿಕ್ಷುಗಳ ಸಮ್ಮುಖದಲ್ಲಿ 10 ಸಾವಿರ ದಲಿತರು ಬೌದ್ಧ ಧರ್ಮವನ್ನು ಸ್ವೀಕರಿಸಿದರು.
ಪುಕಾರಣ್ಯ ಗ್ರಾಮದ ಕಾನ್ಪುರದಲ್ಲಿ ನಡೆದ ಬೌದ್ಧ ಧರ್ಮ ದೀಕ್ಷಾ ಕಾರ್ಯಕ್ರಮದಲ್ಲಿ ಈ ಮತಾಂತರ ಪ್ರಕ್ರಿಯೆ ನಡೆಯಿತು.ಇಂದಿನಿಂದ ನಾವು ಶ್ರೀರಾಮ ಸೇರಿದಂತೆ ಯಾವುದೇ ಹಿಂದೂ ದೇವ-ದೇವತೆಗಳನ್ನು ಪೂಜಿಸುವುದಿಲ್ಲ. ಆ ನಿಟ್ಟಿನಲ್ಲಿ ನಾವು ಕೇವಲ ಬುದ್ಧನ ತತ್ವಗಳನ್ನು ಮಾತ್ರ ಅನುಸರಿಸುತ್ತೇವೆ. ಇದು ನಮಗೆ ಮರುಜನ್ಮ ನೀಡಿದಂತಾಗಿದೆ ಎಂದು ರೂರಾ ಗ್ರಾಮದ ಶಾಕುಂತಲಾ ಕಮಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬೃಹತ್ ಸಮಾರಂಭದಲ್ಲಿ ಭಾರತೀಯ ದಲಿತ್ ಪ್ಯಾಂಥರ್ ಪಕ್ಷದ ಅಧ್ಯಕ್ಷ ಧಾನಿ ರಾವ್ ಅವರು ಭಾಗವಹಿಸಿದ್ದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನ, ವಿಚಾರಧಾರೆಯನ್ವಯ ಬೌದ್ಧ ದೀಕ್ಷೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಹೇಳಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|