|
| ರಿಜ್ವಾನುರ್ ಪ್ರಕರಣದ ವಿಚಾರಣೆಗೆ ಬ್ರೇಕ್ |
| ನವದೆಹಲಿ, ಸೋಮವಾರ, 13 ಅಕ್ಟೋಬರ್ 2008 ( 17:22 IST ) | |
ತಮ್ಮ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದ್ದನ್ನು ಪ್ರಶ್ನಿಸಿ ಕೈಗಾರಿಕೋದ್ಯಮಿ ಅಶೋಕ್ ತೋಡಿ ಅವರ ಸಲ್ಲಿಸಿರುವ ಅರ್ಜಿ ಕೊಲ್ಕತಾ ಹೈಕೋರ್ಟ್ನಲ್ಲಿ ಇತ್ಯರ್ಥವಾಗುವ ತನಕ ರಿಜ್ವಾನುರ್ ರೆಹಮಾನ್ ಪ್ರಕರಣದ ವಿಚಾರಣೆ ಆರಂಭವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ.
ಮುಖ್ಯನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ಅವರಿದ್ದ ಪೀಠವು ತೋಡಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರದಲ್ಲೇ ಇತ್ಯರ್ಥ ಮಾಡುವಂತೆ ಹೈಕೋರ್ಟ್ಗೆ ತಿಳಿಸಿದೆ. ರಿಜ್ವಾನುರ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಸಿಬಿಐ ಸೆ.22ರಂದು ತೋಡಿ ಮತ್ತು ಇನ್ನೂ 6ಮಂದಿಯ ಮೇಲೆ ಆರೋಪಪಟ್ಟಿ ಹೊರಿಸಿತ್ತು.
ತಮ್ಮ ಅರ್ಜಿಯಲ್ಲಿ ವಿಚಾರಣೆ ನ್ಯಾಯಾಲಯದ ಕಲಾಪಕ್ಕೆ ತಡೆವಿಧಿಸುವಂತೆ ತೋಡಿ ಕೋರಿದ್ದಾರೆ. ರಿಜ್ವಾನುರ್ ಸಾವಿನ ಸ್ವರೂಪದ ಬಗ್ಗೆ ತಿಳಿಯಲು ಮಾತ್ರ ಸಿಬಿಐಗೆ ಅವಕಾಶ ನೀಡಲಾಗಿದ್ದರೂ ಅದು ಆರೋಪಪಟ್ಟಿ ಸಲ್ಲಿಸಿದೆ ಎಂದು ತೋಡಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|