|
| ಪಕ್ಷ ಉಗ್ರವಾದವನ್ನು ರಾಜಕೀಯಗೊಳಿಸುತ್ತಿಲ್ಲ: ಸಿಂಗ್ |
| ಹನುಮಾನ್ಗರ್, ಸೋಮವಾರ, 1 ಡಿಸೆಂಬರ್ 2008 ( 16:09 IST ) | |
ಕಾಂಗ್ರೆಸ್ ಪಕ್ಷ ಭಯೋತ್ಪಾದನೆಯನ್ನು ರಾಜಕೀಯಗೊಳಿಸುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಭಯೋತ್ಪಾದನೆಯ ಗಂಭೀರ ಸಮಸ್ಯೆಯನ್ನು ಎದುರಿಸಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ನೀಡಲು ಕರೆ ನೀಡಿದರು.
ರಾಜಸ್ತಾನದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ, ಭಯೋತ್ಪಾದನೆಯನ್ನು ಎದುರಿಸಲು ದೇಶದ ಜನತೆ ಜಾತಿ ಹಾಗೂ ಭಾಷಾ ಭಿನ್ನತೆಗಳಿಂದ ಮೇಲಕ್ಕೆ ಏಳಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಭಯೋತ್ಪಾದನೆಯನ್ನು ರಾಜಕೀಯಗೊಳಿಸುವಲ್ಲಿ ತೊಡಗುವುದಿಲ್ಲ ಎಂಬುದನ್ನು ಹೇಳಲು ತಾನು ಇಚ್ಚಿಸುತ್ತೇನೆ. ಭಯೋತ್ಪಾದನೆ ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಕೈ ಜೋಡಿಸಬೇಕು ಎಂಬುದು ತನ್ನ ಇಚ್ಚೆ ಎಂದು ಸಿಂಗ್ ಮನವಿ ಮಾಡಿದ್ದಾರೆ.
ಭಯೋತ್ಪಾದನೆ ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆ ಎಂದು ಹೇಳಿರುವ ಸಿಂಗ್, ಇದು ರಾಜ್ಯ, ಜಾತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಬದಿಗಿಟ್ಟು ತಾವು ಹಿಂದುಸ್ತಾನಿಗಳು ಎಂಬುದನ್ನು ಸಾಬೀತು ಪಡಿಸುವ ಸಮಯವಾಗಿದೆ ಎಂದು ಕರೆ ನೀಡಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|