|
| ಯುಪಿಎ ಬೆಂಬಲಕ್ಕೆ ತುದಿಗಾಲಲ್ಲಿ ನಿಂತಿರುವ ಬಿಎಸ್ಪಿ, ಎಸ್ಪಿ |
| ಲಕ್ನೊ, ಮಂಗಳವಾರ, 19 ಮೇ 2009 ( 17:20 IST ) | |
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಬೇಷರತ್ ಬಾಹ್ಯ ಬೆಂಬಲ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಬಿಜೆಪಿ ವರಿಷ್ಠೆ ಮಾಯಾವತಿ ಮಂಗಳವಾರ ಘೋಷಿಸಿದ್ದಾರೆ. ಬಿಎಸ್ಪಿಯು 21 ಸಂಸದರ ಬಲವನ್ನು ಹೊಂದಿದೆ.
ಪಕ್ಷದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣಾ ಫಲಿತಾಂಶಗಳು ಹೊರ ಬಿದ್ದ ದಿವಸ ತಾನು ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರುಗಳನ್ನು ತಾನು ಅಭಿನಂದಿಸಿರುವುದಾಗಿ ಮಾಯವತಿ ತಿಳಿಸಿದ್ದಾರೆ.
ಭಾನುವಾರ ಸಂಜೆ ತನ್ನನ್ನು ಸಂಪರ್ಕಿಸಿರುವ ಪ್ರಧಾನಿಯವರು ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಸಕಾರಾತ್ಮಕ ಮನೋಭಾವ ಹೊಂದಬೇಕೆಂದು ನುಡಿದರೆಂದು ಅವರು ಹೇಳಿದ್ದಾರೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಮಂಗಳವಾರ ಮುಂಜಾನೆ ಸಭೆ ಸೇರಿದ್ದು ಚರ್ಚಿಸಿದ ಬಳಿಕ ನೂತನ ಸರ್ಕಾರಕ್ಕೆ ಬೆಂಬಲ ನೀಡುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದರು.
ಸಮಾಜವಾದಿಗಳಿಂದಲೂ ಬೆಂಬಲ ಈ ಮಧ್ಯೆ ಯುಪಿಎ ಸರ್ಕಾರ ಸೇರುವ ಇಂಗಿತ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷವು ತನ್ನ ಬೆಂಬಲವನ್ನು ಘೋಷಿಸಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿ ಸರ್ಕಾರಕ್ಕೆ ಲಿಖಿತ ಬೆಂಬಲ ಘೋಷಿಸುವುದಾಗಿ ಪಕ್ಷದ ನಾಯಕ ಅಮರ್ ಸಿಂಗ್ ಹೇಳಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|