ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಯುಪಿಎ ಬೆಂಬಲಕ್ಕೆ ತುದಿಗಾಲಲ್ಲಿ ನಿಂತಿರುವ ಬಿಎಸ್ಪಿ, ಎಸ್ಪಿ
ಲಕ್ನೊ, ಮಂಗಳವಾರ, 19 ಮೇ 2009   ( 17:20 IST )
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಬೇಷರತ್ ಬಾಹ್ಯ ಬೆಂಬಲ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಬಿಜೆಪಿ ವರಿಷ್ಠೆ ಮಾಯಾವತಿ ಮಂಗಳವಾರ ಘೋಷಿಸಿದ್ದಾರೆ. ಬಿಎಸ್ಪಿಯು 21 ಸಂಸದರ ಬಲವನ್ನು ಹೊಂದಿದೆ.

ಪಕ್ಷದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣಾ ಫಲಿತಾಂಶಗಳು ಹೊರ ಬಿದ್ದ ದಿವಸ ತಾನು ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರುಗಳನ್ನು ತಾನು ಅಭಿನಂದಿಸಿರುವುದಾಗಿ ಮಾಯವತಿ ತಿಳಿಸಿದ್ದಾರೆ.

ಭಾನುವಾರ ಸಂಜೆ ತನ್ನನ್ನು ಸಂಪರ್ಕಿಸಿರುವ ಪ್ರಧಾನಿಯವರು ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಸಕಾರಾತ್ಮಕ ಮನೋಭಾವ ಹೊಂದಬೇಕೆಂದು ನುಡಿದರೆಂದು ಅವರು ಹೇಳಿದ್ದಾರೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಮಂಗಳವಾರ ಮುಂಜಾನೆ ಸಭೆ ಸೇರಿದ್ದು ಚರ್ಚಿಸಿದ ಬಳಿಕ ನೂತನ ಸರ್ಕಾರಕ್ಕೆ ಬೆಂಬಲ ನೀಡುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದರು.

ಸಮಾಜವಾದಿಗಳಿಂದಲೂ ಬೆಂಬಲ
ಈ ಮಧ್ಯೆ ಯುಪಿಎ ಸರ್ಕಾರ ಸೇರುವ ಇಂಗಿತ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷವು ತನ್ನ ಬೆಂಬಲವನ್ನು ಘೋಷಿಸಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿ ಸರ್ಕಾರಕ್ಕೆ ಲಿಖಿತ ಬೆಂಬಲ ಘೋಷಿಸುವುದಾಗಿ ಪಕ್ಷದ ನಾಯಕ ಅಮರ್ ಸಿಂಗ್ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಂಗ್ರೆಸ್‌ ಅವಮಾನಿಸುತ್ತಿದೆ: ಲಾಲೂ ಕೂಗು
ರಾಜ್ ಜತೆ ಸಂಬಂಧ ಮುರಿದ ಬಾಳಾಠಾಕ್ರೆ
ಲೋಕಸಭೆ ಹೊಕ್ಕ ಕ್ರಿಮಿನಲ್‌ಗಳ ಸಂಖ್ಯೆ ಏರಿಕೆ
ಆಡ್ವಾಣಿ ಸ್ಥಾನಭರ್ತಿಗಾಗಿ ಕಸರತ್ತು
300 ಕೋಟ್ಯಧಿಪತಿ ಸಂಸದರ ಶ್ರೀಮಂತ ಲೋಕಸಭೆ
ಪ್ರಧಾನಿ ರಾಜೀನಾಮೆ, ಲೋಕಸಭೆ ವಿಸರ್ಜನೆ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ...
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...