ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ಮತ್ತಷ್ಟು ಆರ್ಥಿಕ ಸುಧಾರಣೆ: ಮನಮೋಹನ್ ಸುಳಿವು
ನವದೆಹಲಿ, ಮಂಗಳವಾರ, 19 ಮೇ 2009   ( 18:34 IST )
ನೂತನ ಸರ್ಕಾರದ ನೇತೃತ್ವ ವಹಿಸಲಿರುವ ಮನಮೋಹನ್ ಸಿಂಗ್ ಅವರು ರಾಷ್ಟ್ರದಲ್ಲಿ ಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಮತ್ತಷ್ಟು ಆರ್ಥಿಕ ಸುಧಾರಣೆಗಳ ಸುಳಿವು ನೀಡಿದರು.ವಿಶ್ವದಲ್ಲಿ ಅಭಿವೃದ್ಧಿಯು ಪಶ್ಚಿಮದಿಂದ ಪೂರ್ವದತ್ತ ತಿರುಗುತ್ತಿರುವ ಈ ಸಂದರ್ಭದಲ್ಲಿ ಭಾರತವು ಅವಕಾಶವನ್ನು ತಪ್ಪಿಸಿಕೊಳ್ಳುವಂತಿಲ್ಲ ಎಂದು ಅವರು ನುಡಿದರು.

ತನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ, ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ಚುನಾವಣೆಯಲ್ಲಿನ ಗೆಲುವು, ಅಭಿವೃದ್ಧಿ ಜಾತ್ಯತೀತತೆ ಮತ್ತು ಬಹುತ್ವದ ಭಾರತಕ್ಕಾಗಿ ಭಾರತದ ಮತದಾರ ನೀಡಿದ ತೀರ್ಪಾಗಿದೆ ಎಂದು ನುಡಿದರು.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸ್ಫೂರ್ತಿದಾಯಕ ನಾಯಕತ್ವ ಹಾಗೂ ರಾಹುಲ್ ಗಾಂಧಿಯವರ ಕೌಶಲ್ಯ ಮತ್ತು ಶ್ರಮಕ್ಕೆ ಸಂದ ಗೆಲುವು ಇದು ಎಂದು ಅವರು ಪಕ್ಷದ ನಾಯಕರನ್ನು ಬಣ್ಣಿಸಿದರು.

ಜಾಗತಿಕ ಆರ್ಥಿತ ಹಿಂಸರಿತವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯನ್ನು ನಿಧಾನಗೊಳಿಸಿದ್ದು, ಅಭಿವೃದ್ಧಿಯನ್ನು ಪುನಶ್ಚೇತನಗೊಳಿಸಲು ಪ್ರಥಮ ಆದ್ಯತೆ ನೀಡಲಾಗುವುದು. ಆದರೆ ಇದಕ್ಕೆ ಹೊಸ ಹೂಡಿಕೆಯ ಅವಶ್ಯಕತೆ ಇದೆ. ಇದಕ್ಕಾಗಿ ಹೂಡಿಕೆಗೆ ಅನುಕೂಲವಾಗುವಂತಹ ಸಾಮಾಜಿಕ ಮತ್ತು ರಾಜಕೀಯ ವಾತವರಣವನ್ನು ಕಲ್ಪಿಸುವ ಅವಶ್ಯಕತೆ ಇದೆ ಎಂದವರು ನುಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಣುಸಮರ್ಥ ಕ್ಷಿಪಣಿ ಅಗ್ನಿ-II ಯಶಸ್ವೀ ಪರೀಕ್ಷೆ
ಸ್ಪಷ್ಟ ಬಹುಮತ ಸಾಧಿಸಿದ ಏಕೈಕ ಸ್ಥಳೀಯ ಪಕ್ಷ ಬಿಜೆಡಿ
ಲೋಕಸಭೆಗೆ 59 ಮಹಿಳಾಮಣಿಗಳ ಆಯ್ಕೆ
ಸೋನಿಯಾ ಸಿಪಿಪಿ ಅಧ್ಯಕ್ಷೆ, ಸಿಂಗ್ ನಾಯಕ
ಯುಪಿಎ ಬೆಂಬಲಕ್ಕೆ ತುದಿಗಾಲಲ್ಲಿ ನಿಂತಿರುವ ಬಿಎಸ್ಪಿ, ಎಸ್ಪಿ
ಕಾಂಗ್ರೆಸ್‌ ಅವಮಾನಿಸುತ್ತಿದೆ: ಲಾಲೂ ಕೂಗು
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...