ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಬೆಂಗಳೂರು, ಶನಿವಾರ, 10 ಮೇ 2008   ( 12:18 IST )
ಚುನಾವಣೆ ಆರಂಭವಾಗಿದೆ. ಜೊತೆ ಜೊತೆಗೆ ಅಕ್ರಮ, ಆಮಿಷಗಳು ಕೂಡಾ ಆರಂಭವಾಗಿದೆ. ರಾಕೀಯ ಪಕ್ಷದ ಕಾರ್ಯಕರ್ತರು ಮತದಾನಕ್ಕೆ ಬರುವ ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ರಾಜಕೀಯ ಪಕ್ಷವೊಂದು ಚುನಾವಣೆ ನಂತರ ಟಿವಿ ಪಡೆಯಲು ಮತದಾರರಿಗೆ ಟೋಕನ್ ಹಂಚಿದೆ. ಕಾರ್ಯಕರ್ತರು ಮತದಾರರ ಮನೆಮನೆಗೆ ಹೋಗಿ ಈ ಟೋಕನ್ ವಿತರಿಸಿದ್ದಾರೆ. ಟೋಕನ್ನಿನಲ್ಲಿ ಹೊರೆಹೊತ್ತ ಮಹಿಳೆಯ ಚಿಹ್ನೆ ಇದೆ ಎನ್ನಲಾಗಿದೆ.ಮತದಾನ ಮಾಡಿ ಬರುತ್ತಿರುವ ಮತದಾರರಿಗೆ ಈ ರೀತಿಯ ಆಮಿಷ ಒಡ್ಡಿದ್ದಾರೆ.

ಲಘು ಲಾಠಿ ಪ್ರಹಾರ: ಚಿಕ್ಕಪೇಟೆಯ ಸೋಮೇಶ್ವರದಲ್ಲಿ ಮತದಾರರ ಪಟ್ಟಿಯಲ್ಲಿನ ಗೊಂದಲದಲ್ಲಿನ ಬಗ್ಗೆ ಮೂರು ಪಕ್ಷಗಳ ನಡುವೆ ವಾಗ್ವಾದ ನಡೆಯಿತು. ವಾಗ್ವಾದ ಸಂಘರ್ಷವಾಗುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ಚದರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಮತ್ತೊಂದು ಘಟನೆಯಲ್ಲಿ ನಕಲಿ ಗುರುತಿನ ಚೀಟಿ ಬಳಸಿ ಮತಚಲಾಯಿಸಲು ಯತ್ನಿಸಿದ 20 ಮಂದಿಯನ್ನು ಬಂಧಿಸಲಾಗಿದೆ. ಇವರು ಬಿಜೆಪಿ ಅಭ್ಯರ್ಥಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಪರ ಮತಚಲಾಯಿಸಲು ಆಂಧ್ರದಿಂದ ಬಂದಿದ್ದಾರೆ ಎನ್ನಲಾಗಿದೆ. ಸರತಿಯಲ್ಲಿ ನಿಂತಿದ್ದ ಇವರ ಬಗ್ಗೆ ಸಂಶಯಗೊಂಡು ವಿಚಾರಣೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ.ಬೆಂಗಳೂರಿನ ಗಂಗಾನಗರದ ಭಾರತಿ ಮಂದಿರದ ಬಳಿ ನಕಲಿ ಮತದಾನಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿ ಕೆಲ ಕಾಲ ಮತದಾನ ಸ್ಥಗಿತವಾಗಿದೆ.

ಶುಕ್ರವಾರ ರಾತ್ರಿ ರಾಜಕೀಯ ಪಕ್ಷವೊಂದು ವಿತರಿಸಿದ ನಕಲಿ ಮದ್ಯ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಅರಕಲಗೂಡಿನ ನೇರಳೆ ಗ್ರಾಮದ ವ್ಯಕ್ತಿ ಈ ರೀತಿ ಸಾವೀಗೀಡಾಗಿದ್ದಾರೆ. ಈ ವರೆಗೆ ಶೆ. 15 ರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶೆ 12 ರಷ್ಟು ಮತದಾನ, ಮತಯಂತ್ರಗಳ ಸಮಸ್ಯೆ
ಚುನಾವಣಾಧಿಕಾರಿಯಿಂದಲೇ ಮತಯಾಚನೆ
ಶಿಕ್ಷಕನ ಮೇಲೆ ಪೊಲೀಸ್ ದೌರ್ಜನ್ಯ. ಧರಣಿ
ನಕಲಿ ಮೂಗುತಿ ಹಂಚಿದ ಮಹಾನ್ ನಾಯಕರು
ಪ್ರಥಮ ಹಂತದ ಚುನಾವಣೆ ಪ್ರಕ್ರಿಯೆ ಆರಂಭ
ಚುನಾವಣಾ ನೀತಿ: ಗೌಡರಿಗೆ ಆಯೋಗದ ಧಮಕಿ
ಗ್ರಹ ಗತಿ
ದೈನಿಕ - ನಿನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಅಳಿವು ಉಳಿವಿನ ಹೋರಾಟಕ್ಕೆ ಸಜ್ಜು
ಕರ್ನಾಟಕ ರಾಜಕೀಯದಲ್ಲಿ ವಂಶಪಾರಂಪರ್ಯ ಆಡಳಿತಕ್ಕೆ ನಾಂದಿ ಹಾಡಿದ ದೇವೇಗೌಡರ ಕುಟುಂಬ...
ನಿರ್ಭೀತಿಯಿಂದ ಮತ ಚಲಾಯಿಸಲು ಸಲಹೆ
ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್
ಮನರಂಜನೆ
ಚಿತ್ರ ಸುದ್ದಿ - ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ
ಮುಂದೆ ಓದಿ|ಮತ್ತಷ್ಟು...
Marketplace