ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಚಿಕೂನ್‌ಗುನ್ಯಾ ರೋಗಕ್ಕೆ 3 ಲಕ್ಷ ಮಂದಿ ತುತ್ತು
ಮಂಗಳೂರು, ಬುಧವಾರ, 2 ಜುಲೈ 2008   ( 12:34 IST )
nrb
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕೂನ್‌ಗುನ್ಯಾ ರೋಗದಿಂದ ಸುಮಾರು 3 ಲಕ್ಷ ಮಂದಿ ಬಳಲುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.ನಗರದಲ್ಲಿ ಅಧಿಕಾರಿಗಳ ಜೊತೆ ಜಿಲ್ಲೆಯಲ್ಲಿ ವ್ಯಾಪಿಸಿರುವ ಚಿಕೂನ್ ಗುನ್ಯ ಕಾಯಿಲೆಯ ಕುರಿತು ನಡೆಸಿದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ತಲುಪುವುದು ಸರ್ಕಾರಿ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ವೈದ್ಯ ಕಾಲೇಜುಗಳು ಒಂದೊಂದು ತಾಲೂಕು ನಿರ್ವಹಿಸಿ ನೆರವಾಗಿವೆ ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯಾದ್ಯಂತ ಹಬ್ಬಿರುವ ಚಿಕೂನ್‌ಗುನ್ಯಾ ಈಗ ಶಿವಮೊಗ್ಗ, ಕಾಸರಗೋಡು, ಕೊಡಗು ಜಿಲ್ಲೆ ಸೇರಿದಂತೆ ಹಲವು ಕಡೆಗಳಿಗೆ ವ್ಯಾಪಿಸಿದೆ. ಈ ನಿಟ್ಟಿನಲ್ಲಿ ಚಿಕೂನ್ಗುನ್ಯಾ ತಡೆಗೆ ಸರ್ಕಾರ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ವರದಿ:

ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಚಿಕೂನ್‌ಗುನ್ಯಾ ಹಾಗೂ ಕೆಲವು ಕಡೆಗಳಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂಜ್ವರ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ನಗರಪಾಲಿಕೆ, ಗ್ರಾಮ ಪಂಚಾಯಿತಿಗಳು ಚಿಕೂನ್‌ಗುನ್ಯಾ ಹಾಗೂ ಡೆಂಗ್ಯೂ ಜ್ವರ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದ್ದು, ಸ್ವಚ್ಛತೆ ಹಾಗೂ ಔಷಧಿ ಪೂರೈಕೆಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ನಿಯೋಗದೊಂದಿಗೆ ನಾವು ಬರೋಲ್ಲ: ಜೆಡಿಎಸ್
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಪೊಲೀಸ್ ಮಹಾನಿರ್ದೇಶಕರಾಗಿ ಶ್ರೀಕುಮಾರ್
ಮನೆ ವಾಸ್ತು ಬದಲಿಯಲ್ಲಿ ಸಚಿವ ಕರುಣಾಕರ ರೆಡ್ಡಿ
ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಸೇವೆ
ಅಮ‌್ಯೂಸ್‌ಮೆಂಟ್ ರೈಡ್‌ನಲ್ಲಿ ಮಹಿಳೆ ಬಲಿ
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ....
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು.
ಮುಂದೆ ಓದಿ|ಮತ್ತಷ್ಟು...