ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಉದ್ಘಾಟನೆಗೊಂಡ ಹೈಕೋರ್ಟ್ ಸಂಚಾರಿ ಪೀಠ
ಧಾರವಾಡ, ಶುಕ್ರವಾರ, 4 ಜುಲೈ 2008   ( 17:59 IST )
ದಶಕಗಳ ಕನಸು ಕೊನೆಗೂ ಸಾಕಾರಗೊಂಡಿದೆ. ಹುಬ್ಬಳ್ಳಿ ಧಾರವಾಡಗಳಲ್ಲಿ ಅವಳಿ ನಗರದಲ್ಲಿ ನಿರ್ಮಾಣವಾಗಿರುವ ಹೈಕೋರ್ಟ್ ಸಂಚಾರಿ ಪೀಠ ಇಂದು(ಶುಕ್ರವಾರ) ಉದ್ಘಾಟನೆಗೊಂಡಿತು. ಈ ಮೂಲಕ ಉತ್ತರ ಕರ್ನಾಟಕದ ಜನತೆಯ ಬಹುದಿನದ ಆಶಯ ಕೊನೆಗೂ ಕೈಗೂಡಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ಹುಬ್ಬಳ್ಳಿ ಧಾರವಾಡದ ಹೈಕೋರ್ಟ್ ಸಂಚಾರಿ ಪೀಠವನ್ನು ಉದ್ಘಾಟಿಸಿದರು. ಈ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸುಪ್ರೀಂಕೋರ್ಟ್ ನ್ಯಾಯಮ‌ೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿರಿಯಾಕ್ ಜೋಸೆಫ್, ಕಾಂಗ್ರೆಸ್ ಹಿರಿಯ ಮುಖಂಡ ಧರಂಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಸಂಚಾರಿ ಪೀಠವನ್ನು ಖಾಯಂ ಪೀಠವನ್ನಾಗಿಸುವ ಆಶಯ ವ್ಯಕ್ತಪಡಿಸಿದರು. ಸಂಚಾರಿ ಪೀಠಕ್ಕೆ ಸರ್ಕಾರದಲ್ಲಿ 115 ಕೋಟಿ ರೂ. ಅನುದಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದರು.

ಏಕೀಕರಣದ ದಿನದಿಂದಲೂ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಿರ್ಮಾಣವಾಗಿರುವ ಈ ಹೈಕೋರ್ಟ್ ಸಂಚಾರಿ ಪೀಠ ಇದೇ ತಿಂಗಳ 7ರಂದು ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.

ಅವಳಿನಗರಗಳ ಸಂಭ್ರಮ

ಬಹುನೀರೀಕ್ಷೆಯ ಹೈಕೋರ್ಟ್ ಸಂಚಾರಿ ಪೀಠಕ್ಕೆ ಉದ್ಘಾಟನೆಗೊಳ್ಳುತ್ತಿದ್ದಂತೆ ಅವಳಿ ನಗರಗಳಲ್ಲಿ ಸಂಭ್ರಮದ ವಾತಾವರಣ ಕಂಡು ಬಂದಿತ್ತು. ಸಂಚಾರಿ ಪೀಠ ಸ್ಥಾಪನೆಗಾಗಿ ಕಳೆದ ಕೆಲವು ವರ್ಷಗಳಿಂದ ವಕೀಲರ ಸಂಘ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು. ಕೊನೆಗೂ ಕಂಡ ಕನಸು ನನಸಾಗಿರುವುದು ಜನರಲ್ಲಿ ಹರ್ಷದ ಭಾವನೆ ಮೂಡಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗಣಿಯ ಸದ್ದು: ಸಮಗ್ರ ತನಿಖೆಗೆ ಕುಮಾರಸ್ವಾಮಿ ಆಗ್ರಹ
ಯಡಿಯ‌ೂರಪ್ಪ ಸುಳ್ಳುಗಾರ: ಬಂಗಾರಪ್ಪ ಆರೋಪ
ಛಾಪಾ ಹಗರಣ ಆರೋಪಿ ತೆಲಗಿಗೆ ಮನೆಊಟದ ಬಯಕೆ
10 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ
ಸಾಹಿತಿಗಳ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಳಗಾವಿ ಹೊರತುಪಡಿಸಿ ಉಳಿದಂತೆ ಶಾಂತಿಯುತ ಬಂದ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ....
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಮನರಂಜನೆ
ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ.
ಮುಂದೆ ಓದಿ|ಮತ್ತಷ್ಟು...