ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಮಹತ್ವದ ಸಭೆ
ಬೆಂಗಳೂರು, ಸೋಮವಾರ, 7 ಜುಲೈ 2008   ( 12:59 IST )
ರಾಜ್ಯ ರಾಜಕೀಯದಲ್ಲಾಗಿರುವ ದಿಢೀರ್ ಬೆಳವಣಿಗೆ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಮಾಜಿ ಉಪಮುಖ್ಯಮಂತ್ರಿ ತಮ್ಮ ಬೆಂಬಲಿಗರು ಹಾಗೂ ನಿಷ್ಠ ಶಾಸಕರ ಜೊತೆಯಲ್ಲಿ ಸಭೆ ನಡೆಸಲಿದ್ದಾರೆ.

ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹುಟ್ಟಿರುವಾಗಲೇ ಈ ಸಭೆ ಕರೆದಿರುವುದು ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದೆ. ಅಲ್ಲದೆ, ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದ ಸಂದರ್ಭದಲ್ಲಿ ನಿಯೋಗದ ಜೊತೆ ಸಿದ್ದರಾಮಯ್ಯ ಭಾಗವಹಿಸದಿರುವುದು ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.

ಈ ನಡುವೆ ರಾಜ್ಯದಲ್ಲಿ ಆಗಿರುವದಿಢೀರ್ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಕೀಯದಲ್ಲಿ ಪಕ್ಷಾಂತರಗೊಳ್ಳುವುದು ಸಾಮಾನ್ಯ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನೀಗ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಧ್ಯಕ್ಕಂತೂ ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. ಅಷ್ಟೇ ಅಲ್ಲ, ಕೆಪಿಸಿಸಿ ನಿಯೋಗದ ಜೊತೆ ದೆಹಲಿಗೆ ಹೋಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಹಿರಿಯ ಶಾಸಕರು ದೆಹಲಿಗೆ ತೆರಳಿದ್ದಾರೆ. ಈ ನಿಯೋಗದ ಜೊತೆ ತಾನು ಹೋಗುವ ಅಗತ್ಯವಿರಲಿಲ್ಲ. ಅಲ್ಲದೆ, ಮೊದಲೇ ಆಯೋಜಿಸಿದ್ದ ಕಾರ್ಯಕ್ರಮ ಬಿಡುವ ಹಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ವಿಧಾನಸಭಾ ಕಾರ್ಯಕಲಾಪಗಳಿಗೂ ಸಿದ್ದರಾಮಯ್ಯ ಸರಿಯಾಗಿ ಹಾಜರಾಗದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಜೀವ್ ಗಾಂಧಿ ವಿವಿ ರಾಮನಗರದಿಂದ ಬಳ್ಳಾರಿಗೆ?
ಸಿಲಿಂಡರ್ ಸ್ಫೋಟಕ್ಕೆ ಇಬ್ಬರ ಬಾಲಕರ ಸಾವು
ಬಿಜೆಪಿ ಗಾಳ: ನಾಲ್ವರು ಶಾಸಕರು ಕಮಲದಳಕ್ಕೆ
ಹೋದರೆ ಹೋಗಲಿ: ದೇವೇಗೌಡರ ಪ್ರತಿಕ್ರಿಯೆ
ಪಕ್ಷ ಒಡೆಯುವ ಕೆಲಸ ಮಾಡಿಲ್ಲ: ಯಡಿಯೂರಪ್ಪ ಸ್ಪಷ್ಟನೆ
600 ಮಾತ್ರೆ ನುಂಗಿದರೂ ಬೆಂಬಿಡದ ಚಿಕೂನ್‌ಗುನ್ಯಾ
ಗ್ರಹ ಗತಿ
ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಮಲದಳಕ್ಕೆ ಸಿಂಧ್ಯಾ ಸೇರ್ಪಡೆ?
ಇತ್ತೀಚೆಗಷ್ಟೇ ಬಿಎಸ್ಪಿಯಿಂದ ಉಚ್ಛಾಟನೆಗೊಂಡಿರುವ ಹಿರಿಯ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರ ಮುಂದಿನ ರಾಜಕೀಯ..
ಚುನಾವಣೆಗೆ ಸಜ್ಜುಗೊಳ್ಳಲು ವೆಂಕಯ್ಯ ನಾಯ್ಡು ಕರೆ
ತನಿಖೆಯಾದರೆ ಗೌಡರ ಕುಟುಂಬ ಜೈಲಿಗೆ: ರೆಡ್ಡಿ
ಮನರಂಜನೆ
ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು?
ಮುಂದೆ ಓದಿ|ಮತ್ತಷ್ಟು...