|
| ವಂಚನೆ ಪ್ರಕರಣ: ಶಾಸಕರಿಬ್ಬರ ಮೇಲೆ ಸಿಬಿಐ ತೂಗುಕತ್ತಿ |
| ಬೆಂಗಳೂರು, ಸೋಮವಾರ, 7 ಜುಲೈ 2008 ( 13:29 IST ) | |
ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿಗೆ ಸರ್ಕಾರದ ಭದ್ರತೆಗಾಗಿ ಪ್ರತಿಪಕ್ಷದ ನಾಯಕರನ್ನು ಸೆಳೆಯಲು ಯತ್ನಿಸುತ್ತಿರುವಂತೆ ಇತ್ತ ಬಿಜೆಪಿ ಶಾಸಕರಿಬ್ಬರು ಸ್ಟೇ'ಟ್ ಬ್ಯಾಂಕ್ ಹಗರಣವೊಂದರಲ್ಲಿ ಭಾಗಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಹಿರಿಯೂರು ಕ್ಷೇತ್ರದ ಪಕ್ಷೇತರ ಶಾಸಕ ಡಿ. ಸುಧಾಕರ್ ಹಾಗೂ ವಸತಿ-ಮುಜರಾಯಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನಲ್ಲಿ ಗೃಹ ಸಾಲ ಪಡೆಯಲು ಗ್ರಾಹಕರು ನಕಲಿ ವೇತನ ಪ್ರಮಾಣಪತ್ರ ಸಲ್ಲಿಸಿ ವಂಚಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಸಿಬಿಐ ತನಿಖೆಯಿಂದ ಬಹಿರಂಗಗೊಂಡಿದೆ.
ಈ ಇಬ್ಬರು ಶಾಸಕರು ನಡೆಸುತ್ತಿರುವ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ನಿವೇಶನ ಹಾಗೂ ಮನೆ ಖರೀದಿಸಿದ ಗ್ರಾಹಕರು, ಸ್ಟೇಟ್ ಬ್ಯಾಂಕಿನಲ್ಲಿ ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಲು ಪರೋಕ್ಷವಾಗಿ ಸಹಕಾರ ನೀಡಿದ್ದಾರೆ. ಈ ಮೂಲಕ ಬ್ಯಾಂಕಿನಿಂದ ಹೆಚ್ಚಿನ ಸಾಲ ಮಂಜೂರು ಮಾಡಿಸಿಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಇಬ್ಬರು ಶಾಸಕರ ವಿರುದ್ಧ ಶೀಘ್ರವೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿರುವ ಸಿಬಿಐ, ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣದ ದಾಖಲಿಸುವಂತೆ ಎಸ್ಬಿಎಂಗೆ ಸೂಚನೆ ನೀಡಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಧನ ಲಾಭದ ನಿರೀಕ್ಷೆ, ಬಂಧು ಬಳಗದವರ ಭೇಟಿಯಾಗಲಿದೆ, ಹಿರಿಯರ ಆಶಿರ್ವಾದದ ಮೂಲಕ ಹಿಡಿದ ಕಾರ್ಯಗಳಲ್ಲಿ ಯಶಸ್ಸು. ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಚಿತ್ರರಂಗದಲ್ಲಿ ಒಂದಲ್ಲ ಒಂದು ಗೊಂದಲ ಸೃಷ್ಟಿಯಾಗುತ್ತಲೇ ಇರುತ್ತದೆ. ಆದರೆ ಈ ಬಾರಿ ಒಂದು ಗೊಂದಲ ಸೃಷ್ಟಿಯಾಗಿದೆ. ಅದು ಚಿತ್ರರಂಗದ ಮಂದಿಯದ್ದಲ್ಲ. ಬದಲಾಗಿ ಪ್ರೇಕ್ಷಕರ ನಡುವೆ. 'ನಿನ್ನ ಪೂಜೆಗೆ ಬಂದೆ ಮಾದೇಶ್ವರ' ಹಾಡು ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ. ಆದರೆ ಇದು ಯಾವ ಚಿತ್ರದ ಹಾಡು? |
| |
|
|
|
|
|
|
|