|
| ರಾಜ್ಯಪಾಲರಿಗೆ ಮುಖ್ಯಮಂತ್ರಿ ಮನವಿ |
| ಬೆಂಗಳೂರು, ಬುಧವಾರ, 16 ಜುಲೈ 2008 ( 19:08 IST ) | |
ರಸಗೊಬ್ಬರ ಕೊರತೆ ಮತ್ತು ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಗುರುವಾರದಂದು ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಯಡಿಯೂರಪ್ಪ, ಇದಕ್ಕೆ ಪೂರ್ವಭಾವಿಯಾಗಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆಯನ್ನು ತುಂಬಿಕೊಡುವಲ್ಲಿ ಕೇಂದ್ರ ಸರ್ಕಾರ ಆಸಕ್ತಿ ವಹಿಸಬೇಕು. ರಾಜ್ಯದ ವಿದ್ಯುತ್ ಕೊರತೆಗೆ ಕೂಡಲೇ ಸ್ಪಂದಿಸಬೇಕೆಂದು ಭೇಟಿಯ ಸಂದರ್ಭದಲ್ಲಿ ಅವರು ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಡೆದ ರಾಜಕೀಯ ವಿದ್ಯಮಾನಗಳ ಕುರಿತೂ ರಾಜ್ಯಪಾಲರಿಗೆ ವಿವರಣೆ ನೀಡಿರುವುದಾಗಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ. ಜನರೊಂದಿಗೆ ಬೆರೆಯುವುದು ಮತ್ತು ನಿಮ್ಮ ಹವ್ಯಾಸದಲ್ಲಿ ಆನಂದಪಡುವುದು ಈಗ ಮಾಡಬೇಕಿದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದುನಿಯಾ ಖ್ಯಾತಿಯ ಬಳಿಕ ನಾಯಕಿ ರಶ್ಮಿ ಸಿಕ್ಕಾಪಟ್ಟೆ ಸಂಭಾವನೆ ಕೇಳುತ್ತಿದ್ದಾರೆ ಎಂದು ನಿಮಾರ್ಪಕ ಸೂರಪ್ಪ ಬಾಬು ಇತ್ತೀಚೆಗೆ ಹೇಳಿಕೆ ನೀಡಿರುವ ಬಗ್ಗೆ ರಶ್ಮಿ ಮುಖ ಊದಿಸಿಕೊಂಡಿದ್ದಾರೆ. |
| |
|
|
|
|
|
|
|