ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮೇಲ್ಮನೆ ಸಭಾಪತಿ ಚುನಾವಣೆ: ಸಂಪುಟದಲ್ಲಿ ನಿರ್ಧಾರ
ಬೆಂಗಳೂರು, ಗುರುವಾರ, 24 ಜುಲೈ 2008   ( 12:54 IST )
ವಿಧಾನಪರಿಷತ್ ಸಭಾಪತಿ ಹುದ್ದೆಗೆ ಚುನಾವಣೆ ನಡೆಸುವ ಸಂಬಂಧ ಇಂದು (ಗುರುವಾರ) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಸಭಾಪತಿ ಹುದ್ದೆಗೆ ಚುನಾವಣೆ ವಿಳಂಬವಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಸಭಾನಾಯಕ ವಿ.ಎಸ್. ಆಚಾರ್ಯ ಈ ವಿಷಯ ತಿಳಿಸಿದರು. ಸಚಿವ ಸಂಪುಟದಲ್ಲಿ ಚುನಾವಣೆ ದಿನ ನಿಗದಿ ಮಾಡುವ ಕುರಿತು ಸಚಿವ ಸಂಪುಟದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಭಾಪತಿ ಚುನಾವಣೆಗೆ ದಿನ ಘೋಷಣೆ ಮಾಡದೇ ಸದನ ನಡೆಸುತ್ತಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕೆಂದು ಪ್ರತಿಪಕ್ಷಗಳು ಆಗ್ರಹಕ್ಕೆ ಸಚಿವರು ಉತ್ತರ ನೀಡಿದರೂ, ಸಮಧಾನಗೊಳ್ಳದ ಪ್ರತಿಪಕ್ಷಗಳು ಧರಣಿಗೆ ಮುಂದಾದರು. ಬಳಿಕ ವಿ.ಎಸ್. ಆಚಾರ್ಯ, ಸಚಿವ ಸಂಪುಟದಲ್ಲಿ ಚುನಾವಣೆಗೆ ದಿನ ಘೋಷಣೆ ಮಾಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಹೊಗೇನಕಲ್ ಯೋಜನೆ, ಲೋಡ್ ಶೆಡ್ಡಿಂಗ್, ಬರ ಪರಿಸ್ಥಿತಿ ಸೇರಿದಂತೆ ರಾಜ್ಯದಲ್ಲಿ ತಲೆದೋರಿರುವ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಂಗ್ರೆಸ್ ವಿಜಯೋತ್ಸವ, ಬಿಜೆಪಿ ಪ್ರತಿಭಟನೆ
ಕಲ್ಲುಗಣಿ ಸ್ಫೋಟದಲ್ಲಿ ಮೃತಗೊಂಡ ಮಹಿಳೆ
ಪೇದೆಗಳಿಗೆ ಇರಿದು ತಪ್ಪಿಸಿಕೊಂಡ ಅಪರಾಧಿ
ರಾಜ್ಯದಲ್ಲಿ ಹೆಚ್ಚಲಿರುವ ವಿದ್ಯುತ್ ಕಡಿತ
ಮಳೆಗೆ ಅವ್ಯವಸ್ಥೆ ಆಗರವಾಗುವ ಮಾರುಕಟ್ಟೆ
ಬಗೆಹರಿಯದ ಎಚ್ಎಎಲ್ ಗೊಂದಲ
ಗ್ರಹ ಗತಿ
ದೈನಿಕ - ಮುಂದಾಲೋಚನೆ ಇಲ್ಲದೆ ಯಾವುದೇ ಕಾರ್ಯಕ್ಕೆ ಇಳಿಯಬೇಡಿ, ನಿರಾಶೆಯಾದಿತು. ನಿಮ್ಮ ಕೀಳರಿಮೆಯಿಂದಾಗಿ ನೌಕರಿಯಲ್ಲಿ ಹೆಣಗಾಟ ಮಾಡಬೇಕಾದಿತು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
pti
 
ಸಿಪಿಎಂನಿಂದ ಸೋಮನಾಥ್ ಚಟರ್ಜಿ ಉಚ್ಚಾಟನೆ
ಸಂಸತ್ತಿನಲ್ಲಿ ವಿಶ್ವಾಸಮತ ಗೊತ್ತುವಳಿಯಲ್ಲಿ ಪಕ್ಷದ ಆದೇಶವನ್ನು....
ವಿಶ್ವಾಸಮತ-ಇಬ್ಬರು ಎನ್‌ಡಿಎ ಸಂಸದರು ನಾಪತ್ತೆ
ಬಿಜೆಪಿ ವಿಪ್ ಉಲ್ಲಂಘನೆ: 8 ಸದಸ್ಯರ ಉಚ್ಚಾಟನೆ
ಮನರಂಜನೆ
ಚಿತ್ರ ಸುದ್ದಿ - ಆಕೆ ರಿಯಲ್ ಲೈಫ್‌ನಲ್ಲಿ ತುಂಬಾ ಮಾಡರ್ನ್ ಹುಡುಗಿ. ಆದರೆ ರೀಲಿನಲ್ಲಿ ಮಾತ್ರ ಲಂಗಧಾವಣಿ ಹಾಕುವಂತಹ ಬೆಡಗಿ. ಈ ಹಿಂದೆ ಯಾವತ್ತೂ ಲಂಗಧಾವಣಿ ಹಾಕದ ರಮ್ಯಾ ಬಾರ್ನಾ 'ನನ್ನೆದಯ ಹಾಡು' ಚಿತ್ರಕ್ಕಾಗಿ ಲಂಗಧಾವಣಿ ತೊಟ್ಟಿದ್ದಾರೆ.
ಮುಂದೆ ಓದಿ|ಮತ್ತಷ್ಟು...