|
| ಕಾಂಗ್ರೆಸ್ ಬಿಟ್ಟು ತೆರಳಲ್ಲ: ಸಿದ್ದರಾಮಯ್ಯ |
| ಮೈಸೂರು, ಶನಿವಾರ, 30 ಆಗಸ್ಟ್ 2008 ( 13:20 IST ) | |
ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಧಾರಕ್ಕೆ ಬದ್ದವಾಗಿರುವುದಾಗಿ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಪಕ್ಷ ಬಿಟ್ಟು ಹೋಗುವ ಕುರಿತು ಇದುವರೆಗೂ ಯಾರೊಂದಿಗೂ ಚರ್ಚಿಸಿಲ್ಲ ಹಾಗೂ ಆ ಕುರಿತು ಚಿಂತನೆ ನಡೆಸಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಅವರು ತಿಳಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರೈತರ ಬಗ್ಗೆ ಕಾಳಜಿ ಹೊಂದಿಲ್ಲ. ಬರಪೀಡಿತ ಪ್ರದೇಶಗಳಿಗೆ ಬಿಡಿಗಾಸು ದೊರೆತಿಲ್ಲ. ಈ ಮುಲಕ ಸರ್ಕಾರ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ಸರ್ಕಾರ ನಿರ್ಧರಿಸಿರುವ ದೇಗುಲ ಹಸ್ತಾಂತರ ಒಂದು ಅಪಾಯಕಾಗಿ ಬೆಳವಣಿಗೆಯಾಗಿದೆ. ಈ ಕುರಿತಾದ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ.ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ನೀವು ಹಿಂದೆ ಕಾರ್ಯಕ್ಷಮತೆಯಿಂದ ನಿರ್ವಹಿಸಿದ್ದ ಕೆಲಸಗಳು ಒಳ್ಳೆಯ ಫಲ ನೀಡಲಿವೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಶಾಸಕರು ಸಚಿವರುಗಳು ಅಮೆರಿಕಾಕ್ಕೆ ಅಕ್ಕಾ ಸಮ್ಮೇಳನಕ್ಕಾಗಿ ಹಾರಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಕನ್ನಡ ಚಿತ್ರರಂಗದಿಂದ ಒಂದಷ್ಟು ಮಂದಿ ಗುರುವಾರ ರಾತ್ರಿ ಅಮೆರಿಕಾಕ್ಕೆ ಹೋಗಿದ್ದಾರೆ. ಅಕ್ಕಾ ಸಮ್ಮೇಳನದಲ್ಲಿ ಕಾರ್ಯಕ್ರಮ ನೀಡಲು ಗುರುಕಿರಣ್ ಹತ್ತು |
| |
|
|
|
|
|
|
|