|
| ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ |
| ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008 ( 19:05 IST ) | |
ರಾಜ್ಯಾದ್ಯಂತ ಧಾರಾಕಾರ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯಿಂದ ಆಗಿರುವ ನಷ್ಟ ಭರಿಸಲು ಕೇಂದ್ರದ ನೆರವು ಕೋರಿ ಸೆ.10ರಂದು ದೆಹಲಿಗೆ ನಿಯೋಗ ಕೊಂಡೊಯ್ಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಮಳೆಯಿಂದಾಗಿರುವ ಹಾನಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷದ ಮಳೆಹಾನಿ ಪ್ರಮಾಣ ಕಡಿಮೆ ಇದೆ. ಕೇಂದ್ರದ ನೆರವು ಕೋರಲು ತೆರಳುವಾಗ ಕಂದಾಯ ಸಚಿವ ಕರುಣಾಕರ ರೆಡ್ಡಿ, ಸಾರಿಗೆ ಸಚಿವ ಅಶೋಕ್ ಅವರು ಸೇರಿ ಹಲವು ಸಚಿವರು ನಿಯೋಗದಲ್ಲಿರುವರು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಕ್ರಮ ಒತ್ತುವರಿಗೆ ಪರಿಹಾರ :
ರಾಜಕಾಲುವೆ, ಕಂದಾಯ ಭೂಮಿ ಸೇರಿದಂತೆ ಹಲವು ಭೂ ಪ್ರದೇಶಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿದವರನ್ನು ತೆರವು ಮಾಡುವುದು ಕಷ್ಟ. ಹಿಂದಿನ ಸರ್ಕಾರಗಳೂ ಇದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮವಾಗಿ ಮನೆ ಕಟ್ಟಿದವರು ಕಂದಾಯವನ್ನು ಪಾವತಿಸುವುದಿಲ್ಲ. ಮಳೆ ಬಂದು ನಷ್ಟವುಂಟಾದಾಗ ಮಾತ್ರ ಸರ್ಕಾರ ಸೂಕ್ತ ಸೌಲಭ್ಯ ಕಲ್ಪಿಸಿಲ್ಲ ಎಂದು ದೂರುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|