|
| ಬಿಬಿಎಂಪಿ ಚುನಾವಣೆ ವಿಳಂಬ: ಜನತಾದಳ ಟೀಕೆ |
| ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008 ( 13:04 IST ) | |
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸದೇ ಉಚ್ಚ ನ್ಯಾಯಾಲಯದಿಂದ ನಿಂದನೆಗೆ ಗುರಿಯಾಗಿರುವ ರಾಜ್ಯ ಸರ್ಕಾರದ ವರ್ತನೆಯನ್ನು ಸಂಯುಕ್ತ ಜನತಾದಳ ತೀವ್ರವಾಗಿ ಖಂಡಿಸಿದೆ. ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇಚ್ಛೆ ಇದ್ದಿದ್ದರೆ ಸರ್ಕಾರ ಚುನಾವಣೆ ನಡೆಸಬಹುದಿತ್ತು ಎಂದು ಹೇಳಿದೆ.
ವಾರ್ಡ್ ವಿಂಗಡಣೆ, ಮೀಸಲಾತಿ ನಿಗದಿ ಹಾಗೂ ಮತದಾರರ ಪಟ್ಟಿ ತಯಾರಿಕೆ ಅಸಾಧ್ಯವಾದ ಕೆಲಸವಾಗಿರಲಿಲ್ಲ. ಹಣಕಾಸು ಸಂಪನ್ಮೂಲದ ಕೊರತೆಯೂ ಇರಲಿಲ್ಲ. ಆದರೂ ಚುನಾವಣೆ ನಡೆಸದೇ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೆಕೆಸಿ ರೆಡ್ಡಿ ಟೀಕಿಸಿದ್ದಾರೆ.
ಚುನಾವಣೆಯನ್ನು ವಿಳಂಬ ಮಾಡುವುದು ಪ್ರಜಾಪ್ರಭುತ್ವದ ತತ್ವ ಸಿದ್ದಾಂತ ಹಾಗೂ ಜನರ ಹಿತಾಸಕ್ತಿಗಳಿಗೆ ವಿರುದ್ಧವಾದುದು. ನಗರ ಪಾಲಿಕೆ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಕುಖ್ಯಾತರಾಗಿದ್ದಾರೆ. ಪಾಲಿಕೆಯ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಕೂಡಲೇ ಚುನಾವಣೆ ನಡೆಸಬೇಕು ಎಂದಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|