|
| ಅಸ್ನೋಟಿಕರ್ ವಿರುದ್ಧ ಸ್ಪರ್ಧಿಸಲಿ: ದನಂಜಯ ಕುಮಾರ್ |
| ಬೆಂಗಳೂರು, ಭಾನುವಾರ, 12 ಅಕ್ಟೋಬರ್ 2008 ( 11:37 IST ) | |
ಸಚಿವ ಆನಂದ್ ಅಸ್ನೋಟಿಕರ್ ವಿರುದ್ಧ ಕಾಂಗ್ರೆಸ್ ನೀಡಿರುವ ಆರೋಪ ಇದೀಗ ರಾಜಕೀಯ ತಿಕ್ಕಾಟಕ್ಕೆ ಎಡೆ ಮಾಡಿಕೊಟ್ಟಿದೆ.
ಆರೋಪವನ್ನು ತೀವ್ರವಾಗಿ ತಳ್ಳಿ ಹಾಕಿರುವ ಕೇಂದ್ರದ ಮಾಜಿ ಸಚಿವ ವಿ. ದನಂಜಯ ಕುಮಾರ್, ಈ ಪ್ರಕರಣದ ಕುರಿತು ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷರು ಆಸ್ನೋಟಿಕರ್ ವಿರುದ್ಧ ಕಾರವಾರ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಸವಾಲು ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಆಸ್ನೋಟಿಕರ್ ಅವರನ್ನು ಎದುರಿಸಲು ಭಯಪಡುತ್ತಿರುವ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ದಿಲೀಪ್ ನಾಯಕ್ ಕೊಲೆ ಪ್ರಕರಣದಲ್ಲಿ ಅನವಶ್ಯಕವಾಗಿ ಆನಂದ್ ಅಸ್ನೋಟಿಕರ್ ಹೆಸರು ಪ್ರಸ್ತಾಪಿಸುವ ಮೂಲಕ ಪ್ರಕರಣದ ಹಾದಿ ತಪ್ಪಿಸುವ ಯತ್ನ ಇದಾಗಿದೆ ಎಂದು ತಿಳಿಸಿದ ಅವರು, ಈ ಪ್ರಕರಣದ ಪ್ರಮುಖ ಆರೋಪಿ ರಾಜುಶೆಟ್ಟಿ ಮಂಪರು ಪರೀಕ್ಷೆ ಸಂದರ್ಭದಲ್ಲಿ ದೇಶಪಾಂಡೆ ಹೆಸರು ಪ್ರಸ್ತಾಪಿಸಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|