|
| ಸತ್ತವರವಲ್ಲಿ ಮೂವರು ಮಹಿಳೆಯರು, ಒಬ್ಬ ಬಾಲಕಿ |
| ಕೋಲಾರ, ಸೋಮವಾರ, 13 ಅಕ್ಟೋಬರ್ 2008 ( 17:42 IST ) | |
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ ಗಳ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸತ್ತವರು ಮೂವರು ಮಹಿಳೆಯರು,ಒಬ್ಬ ಬಾಲಕಿ ಸೇರಿದಂತೆ 10 ಮಂದಿ ಪ್ರಯಾಣಿಕರು ಸೇರಿದ್ದಾರೆ. ಈ ದುರ್ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕೋಲಾರ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿಯ ಹನುಮನಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ1.45ಕ್ಕೆ ಈ ದುರಂತ ಸಂಭವಿಸಿತೆಂದು ಹೇಳಲಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಮತ್ತು ಬೆಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ವೋಲ್ವೊ ಬಸ್ಸುಗಳು ಹನುಮನಹಳ್ಳಿ ಕ್ರಾಸ್ ಬಳಿ ಡಿಕ್ಕಿಹೊಡೆದು ಅಪಘಾತ ಸಂಭವಿಸಿತೆಂದು ಹೇಳಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ವೋಲ್ವೊ ಬಸ್ ಚಾಲಕ ಲಕ್ಷ್ಮಯ್ಯ, ಚೆನ್ನೈಗೆ ತೆರಳಿದ್ದ ಅಮಿತ್ ಕುಮಾರ್ ಸಿಂಗ್, ರೇಖಾ, ಹಾಸನದ ನಾಗರಾಜ್ ಮತ್ತು ಆರ್ಟಿನಗರದ ವಿಷ್ಣುಪ್ರಿಯ, ಪಂಕಜ್ ಮತ್ತು ಸಚಿನ್ ಎಂದು ಗುರುತಿಸಲಾಗಿದ್ದು ಉಳಿದವರ ವಿವರಗಳು ತಿಳಿದುಬಂದಿಲ್ಲ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|