ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮೇವರಿಕ್ ಗುತ್ತಿಗೆ: ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು, ಶುಕ್ರವಾರ, 7 ನವೆಂಬರ್ 2008   ( 10:58 IST )
ನಗರದ ಕೋರಮಂಗಲದ ಈಜಿಪುರದಲ್ಲಿ ಆರ್ಥಿಕವಾಗಿ ದುರ್ಬಲರಿಗೆ ಕ್ವಾರ್ಟರ್ಸ್ ನಿರ್ಮಾಣ ಮಾಡುವ ಹೊಣೆಯನ್ನು ಮೇವರಿಕ್ ಸಂಸ್ಥೆಗೆ ವಹಿಸಿರುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕ್ವಾರ್ಟರ್ಸ್ ನಿರ್ಮಾಣ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ನೀಡಿರುವುದನ್ನು ಪ್ರಶ್ನಿಸಿ ಮುಂಬೈ ಮೂಲದ ಆಕೃತಿ ಸಿಟಿ ಲಿಮಿಟೆಡ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಮತ್ತು ಮೇವರಿಕ್ ಹೋಲ್ಡಿಂಗ್ಸ್ ಅಂಡ್ ಇನ್ವೆಸ್ಟ್ ಮೆಂಟ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಕರಣದ ಹಿನ್ನೆಲೆ:
ಕೋರಮಂಗಲದ ಈಜಿಪುರದಲ್ಲಿ ಆರ್ಥಿಕವಾಗಿ ದುರ್ಬಲರಿಗೆಂದು ನಿರ್ಮಿಸಲು ಯೋಜಿಸಿದ್ದ ಕ್ವಾರ್ಟರ್ಸ್ ನಿರ್ಮಾಣ ಕಾಮಗಾರಿಯನ್ನು ರಾಜ್ಯ ಸರ್ಕಾರ ಮೇವರಿಕ್ ಸಂಸ್ಥೆಗೆ ವಹಿಸಿಕೊಟ್ಟಿತು. ಇದನ್ನು ಪ್ರಶ್ನಿಸಿ ಆಕೃತಿ ಸಿಟಿ ಲಿಮಿಟೆಡ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸರ್ಕಾರ ಕಾನೂನು ಬಾಹಿರವಾಗಿ ಈ ಕ್ರಮ ಕೈಗೊಂಡಿದೆ. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿತ್ತು. ಅಲ್ಲದೆ, ಮೇವರಿಕ್ ಸಂಸ್ಥೆಗೆ ವಸತಿ ನಿರ್ಮಾಣ ಯೋಜನೆಯನ್ನು ವಹಿಸಿಕೊಟ್ಟ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಬೇಕೆಂಬ ಮಧ್ಯಂತರ ಕೋರಿಕೆಯನ್ನು ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಮಧ್ಯಂತರ ಕೋರಿಕೆಯನ್ನು ಮಾನ್ಯ ಮಾಡಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯದ ತಡೆಯಾಜ್ಞೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಗಮನಿಸಿದರೆ ಸರ್ಕಾರ ತಪ್ಪು ಎಸಗಿರುವ ಅಂಶ ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಪರೇಷನ್ ಕಮಲದಿಂದ ಬಿಜೆಪಿಗೆ ಕುತ್ತು: ಕುಮಾರಸ್ವಾಮಿ
ಪಕ್ಷದ ಗೆಲುವಿಗೆ ತಾಳ್ಮೆ ಹಾಗೂ ಹುಮ್ಮಸ್ಸು ಅಗತ್ಯ: ಡಿ.ಕೆ.ಶಿ
ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಕರಂದ್ಲಾಜೆ
ಕೆಎಂಎಫ್ ಲೆಕ್ಕ ಪರಿಶೋಧನೆಗೆ ತಂಡ
20 ಶತಕೋಟಿ ಐಟಿ ರಫ್ತು ಗುರಿ: ಯಡಿಯೂರಪ್ಪ
ಹೊಗೇನಕಲ್ ವಿವಾದ: ಸರ್ವಪಕ್ಷ ನಿಯೋಗಕ್ಕೆ ಚಿಂತನೆ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್,
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸ್ ಕ್ಷಮೆ ಕೇಳಬೇಕು: ಮುಖ್ಯಮಂತ್ರಿ ಆಗ್ರಹ
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿರುವ....
ಲೋಕಾಯುಕ್ತ ತನಿಖೆಗೆ ಸಿದ್ಧ: ರೇವಣ್ಣ
ಪಂಚಾಯ್ತಿಗಳಿಗೆ ಉಸ್ತುವಾರಿ ಸಮಿತಿ: ಉಗ್ರಪ್ಪ ಕಿಡಿ
ಮನರಂಜನೆ
ಚಿತ್ರ ಸುದ್ದಿ - ಯಶಸ್ಸಿನ ನಿರೀಕ್ಷೆಯೊಂದಿಗೆ ಯಶಸ್ ಮತ್ತೆ ಬೆಳ್ಳಿತೆರೆಗೆ ಕಾಲಿರಿಸಿದ್ದಾರೆ. ಯುಗಯುಗಗಳೇ ಸಾಗಲಿ ಎಂಬ ಚಿತ್ರದಿಂದ ನಾಯಕ ಪಟ್ಟ ಗಿಟ್ಟಿಸಿಕೊಂಡರೂ ಚಿತ್ರ ಮಾತ್ರ ಗೆಲ್ಲಲಿಲ್ಲ ಎಂಬ ಬೇಸರ ಅವರಲ್ಲಿತ್ತು. ಸಂಗಮ ಚಿತ್ರದಲ್ಲಿ ಪುಟ್ಟ ಪಾತ್ರವೊಂದನ್ನು ಬಿಟ್ಟರೆ ಕೆಲ ಕಾಲ ಗಾಂಧಿನಗರದಿಂದ ದೂರ ಉಳಿದಿದ್ದರು.
ಮುಂದೆ ಓದಿ|ಮತ್ತಷ್ಟು...