|
| ರಾಜಕಾರಣಿಗಳಿಗೆ ಪ್ರವೇಶವಿಲ್ಲ: ಉನ್ನಿಕೃಷ್ಣನ್ ತಂದೆ |
| ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008 ( 12:56 IST ) | |
ಮುಂಬೈಯಲ್ಲಿ ಉಗ್ರರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ ಉನ್ನಿಕೃಷ್ಣನ್ ಕೋಪಿಸಿಕೊಂಡಿದ್ದರು. ರಾಜಕಾರಣಿಗಳು ಸಾಂತ್ವನ ಹೇಳಲು ಅವರ ಮನೆಗೆ ಬರುತ್ತಿರುವುದೇ ಅವರ ಕೋಪಕ್ಕೆ ಕಾರಣವಾಗಿತ್ತು.
ಸುದೀಪ್ ವೀರಮರಣ ಅಪ್ಪಿದ ಬಳಿಕ ಇಸ್ರೋ ಲೇಔಟ್ ಅವರ ನಿವಾಸಕ್ಕೆ ರಾಜಕಾರಣಿಗಳ ದಂಡೇ ಹರಿದು ಬರುತ್ತಿದೆ. ಆದರೆ ಅದು ಅವರಿಗೆ ಇಷ್ಟವಿಲ್ಲ. ರಾಜಕಾರಣಿಗಳು ಬರುವುದು ಕೇವಲ ರಾಜಕೀಯಕ್ಕಾಗಿ ಎಂಬುದು ಉನ್ನಿಕೃಷ್ಣನ್ ಅಭಿಪ್ರಾಯ. ಭಾನುವಾರ ಉನ್ನಿಕೃಷ್ಣನ್ ಮನೆಗೆ ಭೇಟಿ ನೀಡಿದ ಕೇರಳ ಮುಖ್ಯಮಂತ್ರಿ ಅಚ್ಯುತಾನಂದನ್ ಹಾಗೂ ಅಲ್ಲಿನ ಗೃಹ ಸಚಿವರನ್ನು ಉನ್ನಿಕೃಷ್ಣನ್ ಮನೆಯೊಳಗೆ ಸೇರಿಸಲಿಲ್ಲ.
'ನಿನ್ನನ್ನು ಇಲ್ಲಿಗೆ ಬರಲು ಹೇಳಿದವರು ಯಾರು? ರಾಜಕಾರಣಿಗಳು ಮನೆಗೆ ಬರುವುದು, ನನ್ನ ಮಗ ರಾಜಕೀಯ ವಸ್ತುವಾಗುವುದು ನನಗೆ ಇಷ್ಟವಿಲ್ಲ. ಪ್ಲೀಸ್ ಗೇಟ್ ಔಟ್' ಎಂದು ಗುಡುಗಿದರು.
ಅಚ್ಯುತಾನಂದ ಭೇಟಿಗೂ ಕಾರಣವಿದೆ. ಉನ್ನಿಕೃಷ್ಣನ್ ಮೂಲತಃ ಕೇರಳದವರು. ಉದ್ಯೋಗ ಹರಸಿ ಬೆಂಗಳೂರಿಗೆ ಬಂದು ನೆಲೆಸಿದರು. ವೀರ ಮರಣ ಅಪ್ಪಿದ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ ಎಂಬ ಆಕ್ಷೇಪ ವ್ಯಕ್ತವಾದ್ದರಿಂದ ಅಚ್ಯುತಾನಂದನ್ ಭಾನುವಾರ ಮುಂಬೈಯಿಂದ ನೇರವಾಗಿ ಬೆಂಗಳೂರಿಗೆ ಬಂದರು.
ಮುಖ್ಯಮಂತ್ರಿ ಜೊತೆ ಬಂದಿದ್ದ ಗೃಹ ಸಚಿವರು ಉನ್ನಿಕೃಷ್ಣನ್ ಕೋಪ ನೋಡಿ ಒಳ ಪ್ರವೇಶಿಸುವ ಧೈರ್ಯ ಮಾಡಲಿಲ್ಲ. ಯಾವುದೇ ಕಾರಣಕ್ಕೂ ರಾಜಕಾರಣಿಗಳಿಗೆ ನಮ್ಮ ಮನೆಗೆ ಪ್ರವೇಶವಿಲ್ಲ ಎಂದು ಅವರು ಹೇಳುತ್ತಿದ್ದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|