|
| ನಾನು ರಾಜಕಾರಣಿ ವಿರೋಧಿಯಲ್ಲ: ಉನ್ನಿಕೃಷ್ಣನ್ |
| ಬೆಂಗಳೂರು, ಮಂಗಳವಾರ, 2 ಡಿಸೆಂಬರ್ 2008 ( 16:15 IST ) | |
ರಾಜಕಾರಣಿಗಳ ವಿರುದ್ಧ ತಮಗೆ ಯಾವುದೇ ಧ್ವೇಷವಿಲ್ಲ. ನಾನು ರಾಜಕಾರಣಿಗಳ ವಿರೋಧಿಯಲ್ಲ. ರಾಜಕಾರಣಿಗಳು ಪ್ರಜಾಪ್ರಭುತ್ವದ ಭಾಗವಷ್ಟೇ ಎಂದು ಮುಂಬಯಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಅವರ ತಂದೆ ಉನ್ನಿಕೃಷ್ಣನ್ ಅವರ ಮಾತು.
ಕೇರಳ ಸಿಎಂ ವಿ.ಎಸ್. ಅಚ್ಯತಾನಂದನ್ ಮತ್ತು ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರನ್ನು ಭೇಟಿಯಾಗಲು ನಿರಾಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಮಾಧ್ಯಮಗಳ ವರದಿ ಗಮನಿಸಿ ಸಚಿವರು ಆಗಮಿಸಿದರು. ಯಾರದೋ ಒತ್ತಾಯದ ಮೇರೆಗೆ ಸಾಂತ್ವನ ಹೇಳಲು ಬರುವುದು ನನಗಿಷ್ಟವಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಪ್ರಸ್ತುತ ದೇಶ ಸಂಕಷ್ಟದಲ್ಲಿದೆ. ನನ್ನ ಪ್ರತಿಕ್ರಿಯೆಯನ್ನು ತಪ್ಪಾಗಿ ಅರ್ಥೈಸಿವುದಾಗಲಿ, ವಿಪರೀತ ಅರ್ಥ ಕಲ್ಪಿಸುವುದಾಗಲಿ ನನಗಿಷ್ಟವಿಲ್ಲ. ರಾಜಕಾರಣಿಗಳು ರಾಜೀನಾಮೆ ನೀಡುತ್ತಿದ್ದಾರೆ. ಆದರೆ ನನ್ನ ಟೀಕೆ ಅದ್ಯಾವುದಕ್ಕೂ ಸಂಬಂಧಿಸಿದ್ದಲ್ಲ. ಸಹಜವಾದ ಸಾಂತ್ವನವನ್ನು ನಿರೀಕ್ಷಿಸಿದ್ದೆ ಎಂದು ಅವರು ತಿಳಿಸಿದ್ದಾರೆ.
ಕೇರಳದ ಸಚಿವರು ಐದಾರು ಬಾರಿ ದೂರವಾಣಿ ಕರೆ ಮಾಡಿಸಿದರೂ ಉನ್ನಿಕೃಷ್ಣನ್ ಪ್ರತಿಕ್ರಿಯಿಸಲಿಲ್ಲ. ಸಿಎಂ ಮತ್ತು ಸಚಿವರು ನೇರವಾಗಿ ಮನೆಗೆ ಬಂದಾಗಲೂ ಅವರನ್ನು ಭೇಟಿ ಮಾಡಲು ನಿರಾಕರಿಸಿದ್ದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|