|
| ವಿದೇಶಿಯರ ಮಾಹಿತಿ ಸಂಗ್ರಹಕ್ಕೆ ಸಿಎಂ ಸೂಚನೆ |
| ಬೆಂಗಳೂರು, 3 ಡಿಸೆಂಬರ್ 2008 ( 13:46 IST ) | |
ಪಾಸ್ಪೋರ್ಟ್ ಅವಧಿ ಮುಗಿದರೂ ರಾಜ್ಯದಲ್ಲಿಯೇ ತಂಗಿರುವ ವಿದೇಶಿಯರ ಕುರಿತಾಗಿ ಮಾಹಿತಿ ಸಂಗ್ರಹಕ್ಕೆ ಪೊಲೀಸ್ ಇಲಾಖೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮುಂಬಯಿಯಲ್ಲಿ ಭಯೋತ್ಪಾದಕರ ಘಟನೆ ನಂತರದಲ್ಲಿ ಉಗ್ರರ ಮುಂದಿನ ಗುರಿ ಬೆಂಗಳೂರು ಆಗಿದೆ ಎಂಬ ವರದಿ ಇದ್ದು, ಈ ನಿಟ್ಟಿನಲ್ಲಿ ಅಗತ್ಯ ಭದ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಪಾಸ್ಪೋರ್ಟ್ ಅವಧಿ ಮುಗಿದರೂ ರಾಜ್ಯದಲ್ಲಿ ತಂಗಿದ್ದವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುವುದು. ರಾಜ್ಯಕ್ಕೆ ಆಗಮಿಸುವ ವಿದೇಶೀಯರಿಗೆ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗುವುದೆಂದು ಅವರು ಹೇಳಿದರು.
ಭಯೋತ್ಪಾದಕ ಕೃತ್ಯಗಳನ್ನು ಮಟ್ಟಹಾಕುವ ಹಾಗೂ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ 750 ವಿಶೇಷ ಯೋಧರ ಪಡೆ ರಚಿಸಲಾಗುವುದು. ಕೆಎಸ್ಆರ್ಪಿಯ 100 ಜನರಿಗೆ ವಿಶೇಷ ತರಬೇತಿ ನೀಡಲಾಗುವುದೆಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಪೊಲೀಸ್ ಇಲಾಖೆ ಆಧುನೀಕರಣಕ್ಕೆ 93 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಇಲಾಖೆ ಅಭಿವೃದ್ದಿಗೆ ಯಾವುದೇ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|