|
| ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ |
| ಬೆಂಗಳೂರು, 5 ಜನವರಿ 2009 ( 13:35 IST ) | |
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಬಿರುಸಿನ ತಯಾರಿ ನಡೆಸಿದೆ. ಜನವರಿಯೊಳಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ತೀರ್ಮಾನಿಸಿದೆ.ಪಕ್ಷದ ಕೇಂದ್ರ ಚುನಾವಣಾ ಪ್ರಚಾರ ಸಮಿತಿ ಜ.19ರಿಂದ 21ರ ವರೆಗೆ ಸಭೆ ನಡೆಸಿ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದೆ. ಜ.28 ಮತ್ತು 29ರಂದು ಎರಡನೇ ಬಾರಿ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಮಟ್ಟದ ಚುನಾವಣಾ ಸಮಿತಿ ಸಭೆ ಶೀಘ್ರದಲ್ಲಿಯೇ ನಡೆಯಲಿದೆ. ಅಭ್ಯರ್ಥಿಗಳ ಶಿಫಾರಸ್ಸು ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯುವುದರೊಳಗೆ ಕಳುಹಿಸುವಂತೆ ರಾಜ್ಯ ಘಟಕಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಮುಂಬರುವ ಚುನಾವಣೆಯಲ್ಲಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ಬಿಜೆಪಿ ಉದ್ದೇಶಿಸಿದೆ. 18 ರಿಂದ 25 ವಯಸ್ಸಿನ ಮತದಾರರನ್ನು ಆಕರ್ಷಿಸಲು ಪ್ರತಿ ಲೋಕಸಭಾ ಕ್ಷೇತ್ರ ಮಟ್ಟದಲ್ಲಿ ಜ.16ರಿಂದ ಒಂದು ತಿಂಗಳವರೆಗೆ ಪ್ರಚಾರಾಂದೋಲನ ಕೈಗೊಳ್ಳಲಿದೆ ಎಂದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್ಗೆ ಹೊಂದಿಕೆಯಾಗುವುದರಿಂದ |
| |
|
|
|
|
|
|
|