ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕಾಂಗ್ರೆಸ್ಸಿನಿಂದ ಪ್ರತಿಭಾನ್ವೇಷಣೆ ಕಾರ್ಯಕ್ರಮ
ಬೆಂಗಳೂರು, ಗುರುವಾರ, 8 ಜನವರಿ 2009   ( 11:52 IST )
ರಾಜ್ಯದಲ್ಲಿ ಯುವ ಕಾಂಗ್ರೆಸ್‌ನ್ನು ಪುನಾರಚಿಸಿ ಹೊಸಬರಿಗೆ ಅವಕಾಶ ನೀಡುವ ಉದ್ದೇಶದಿಂದ ಈ ತಿಂಗಳ 15 ಮತ್ತು 16 ರಂದು 2 ದಿನಗಳ ಕಾಲ ರಾಜ್ಯಮಟ್ಟದ ಪ್ರತಿಭಾನ್ವೇಷಣೆ ಕಾರ್ಯಕ್ರಮ ನಡೆಯಲಿದೆ.

ರಾಜಕಾರಣಕ್ಕೆ ಯುವ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಿ, ಪ್ರತಿಭಾವಂತರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ತನ್ವರ್, ಎಐಸಿಸಿ ಕಾರ್ಯದರ್ಶಿ ಜಿತೇಂದ್ರಸಿಂಗ್ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಗಳಲ್ಲಿ ಶಿಫಾರಸ್ಸಿಗಿಂತ ಪ್ರತಿಭಾವಂತರಿಗೆ ಪ್ರಾಧಾನ್ಯತೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಪ್ರಸಕ್ತ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕಾದರೆ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರಕ್ಕೆ ಬರಬೇಕು. ಅದಕ್ಕಾಗಿ ರಾಜಕೀಯದಲ್ಲಿ ಆಸಕ್ತಿ ಇರುವ 35 ವರ್ಷದೊಳಗಿನ ಯಾರು ಬೇಕಾದರೂ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರತಿಭಾವಂತರಿಗೆ ರಾಜ್ಯ ಮತ್ತು ಜಿಲ್ಲಾ ಘಟಕಗಳ ಪುನಾರಚನೆ ಸಂದರ್ಭದಲ್ಲೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗೆಲುವಿಗೆ ವೈಯಕ್ತಿಕ ವರ್ಚಸ್ಸು ಕಾರಣ: ಕತ್ತಿ
ಗುಲ್ಬರ್ಗಾ: ಬುದ್ಧ ವಿಹಾರ ಲೋಕಾರ್ಪಣೆ
ಲಾರಿ ಮುಷ್ಕರ ಕೈಬಿಡದಿದ್ದರೆ ಎಸ್ಮಾ ಜಾರಿ: ಅಶೋಕ್
ಅಜಿತ್ ದೊವಾಲ್ ಆಂತರಿಕ ಸಲಹೆಗಾರ
ಸರ್ಕಾರದ ವಿರುದ್ಧ ರೈತ ಸಂಘ ಸಮರಕ್ಕೆ ಸಜ್ಜು
ಕಾನೂನು ಆಯೋಗ ರಚನೆ
ಗ್ರಹ ಗತಿ
ದೈನಿಕ - ಕಾರ್ಯವೊಂದನ್ನು ಪೂರ್ಣಗೊಳಿಸುವಲ್ಲಿ ನಿಮ್ಮ ಸಂಗಾತಿಯ ಮಹತ್ವದ ಬೆಂಬಲ ಪಡೆಯುತ್ತೀರಿ. ಸೇವಾ ವರ್ಗದ ಜನರು ಇಂದು ದಿಢೀರ್ ಲಾಭ ಗಳಿಸುವ ಸಾಧ್ಯತೆ ಇದೆ. ನೀವಿಂದು ಮಾನಸಿಕವಾಗಿ ನಿರಾಳರಾಗಿರುತ್ತೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಲಾರಿ ಮುಷ್ಕರ ಕೈಬಿಡದಿದ್ದರೆ ಎಸ್ಮಾ ಜಾರಿ: ಅಶೋಕ್
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ನಡೆಸುತ್ತಿರುವ ಲಾರಿ ಮುಷ್ಕರ ಬುಧವಾರ...
ಗುಲ್ಬರ್ಗಾ: ಬುದ್ಧ ವಿಹಾರ ಲೋಕಾರ್ಪಣೆ
ಗೆಲುವಿಗೆ ವೈಯಕ್ತಿಕ ವರ್ಚಸ್ಸು ಕಾರಣ: ಕತ್ತಿ
ಮನರಂಜನೆ
ಚಿತ್ರ ಸುದ್ದಿ - ಸುದೀಪ್ ನಿರ್ದೇಶಿಸಿ ನಟಿಸಿದ 'ವೀರಮದಕರಿ' ಚಿತ್ರದ ಬಗ್ಗೆ ಹೆಚ್ಚು ವಿಶ್ವಾಸವಿಟ್ಟಿದ್ದಾರೆ. ದಿನೇಶ್ ಗಾಂಧಿ ನಿರ್ಮಾಣದ ಚಿತ್ರದ ನಿರ್ದೇಶನ ಜವಾಬ್ದಾರಿಯನ್ನು ಕೊನೆಗೆ ಸ್ವತಃ ಸುದೀಪ್ ವಹಿಸಿಕೊಂಡರು. ಚಿತ್ರದ
ಮುಂದೆ ಓದಿ|ಮತ್ತಷ್ಟು...