|
| ಕಾಂಗ್ರೆಸ್ ಭಿನ್ನಮತದಿಂದ ಬಿಜೆಪಿಗೆ ಗದ್ದುಗೆ |
| ಬೆಂಗಳೂರು, 6 ಮಾರ್ಚ್ 2009 ( 15:01 IST ) | |
ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಹಾಗೂ ಜೆಡಿಎಸ್ ನಾಯಕರ ನಂಬಿಕೆ ದ್ರೋಹದ ಫಲದಿಂದ ರಾಜ್ಯದಲ್ಲಿ ಇಂದು ಬಿಜೆಪಿ ಅಧಿಕಾರದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯವಿರುವುದು ಕಾರ್ಯರ್ತರಲ್ಲಿ ಅಲ್ಲ, ಮುಖಂಡರಲ್ಲಿ. ಈ ಅಸಮಾಧಾನಗಳನ್ನು ನಾವು ಬಗೆಹರಿಸಿಕೊಳ್ಳಬೇಕು. ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎಂದು ಕರೆ ನೀಡಿದರು. ಪಕ್ಷದಲ್ಲಿ ಎಲ್ಲರೂ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಆದರೆ ಪಕ್ಷಕ್ಕೆ ತಾವೇನು ಕೊಡುಗೆ ನೀಡುತ್ತಿದ್ದೇವೆ ಎಂಬುದನ್ನು ಯೋಚಿಸುತ್ತಿಲ್ಲ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿವೆ. ಆದರೆ, ಇವುಗಳನ್ನು ಸಮರ್ಥವಾಗಿ ಮುಟ್ಟಿಸಲು ಎಲ್ಲ ರಾಕೀಯ ಮುಖಂಡರೂ ವಿಫಲರಾಗಿದ್ದಾರೆ ಎಂದ ದೇಶಪಾಂಡೆ ನಮ್ಮ ತಪ್ಪಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇವತ್ತು ಮತಬ್ಯಾಂಕ್ ರಾಜಕಾರಣಕ್ಕಾಗಿ ಧರ್ಮ ಮತ್ತು ಜಾತಿ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಒಡಕು ಮೂಡಿಸುತ್ತಿದೆ ಎಂದು ಅವರು ದೂರಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ಕೃಷಿಕರಿಗೆ ನೂತನ ಆಲೋಚನೆಗಳು ಎದುರಾಗುತ್ತವೆ. ಮನೆಯಲ್ಲಿ ಶುಭಕಾರ್ಯಗಳು ನಡೆಯುತ್ತವೆ.ವ್ಯಾಪಾರಿಗಳಿಗೆ ಉತ್ತಮ ಧನಲಾಭ.ಸ್ತ್ರೀಯರಿಂದ ದೂರವಿರಿ. ಇಲ್ಲವಾದಲ್ಲಿ ಹಾನಿ ಸಂಭವ. ವಿದ್ಯಾರ್ಥಿಗಳು ಪ್ರೇಮ ಪ್ರಣಯದಿಂದ ದೂರವಿರುವುದು ಉಚಿತ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಹಾಡೊಂದರ ಸಾಲನ್ನೇ ಟೈಟಲ್ಲಾಗಿಸಿ ಬರುತ್ತಿರುವ ಚಿತ್ರ 'ಈ ಸಂಜೆ'. ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್ ಕಾರ್ಯವನ್ನು ಮುಗಿಸಿ ಈಗ ಹಿನ್ನೆಲೆ ಸಂಗೀತ ಕಾರ್ಯಕ್ಕೆ ಸಿದ್ಧತೆ |
| |
|
|
|
|
|
|