ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ನೆಲ-ಜಲ-ಭಾಷೆಗಾಗಿ ಹೋರಾಡುವೆ:ಬಿ.ವೈ.ರಾಘವೇಂದ್ರ
ದಾವಣಗೆರೆ, ಮಂಗಳವಾರ, 19 ಮೇ 2009   ( 12:26 IST )
ನೆಲ-ಜಲ ಭಾಷೆ ಜತೆಗೆ ಸಮಗ್ರ ಕರ್ನಾಟಕದ ಹಿತ ಕಾಯಲು ಶ್ರಮಿಸುವುದಾಗಿ ಪ್ರಥಮ ಬಾರಿಗೆ ಸಂಸತ್ ಪ್ರವೇಶಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಘೋಷಣೆಯಾದರೂ ಈಗ ಸೌಲಭ್ಯಕ್ಕಾಗಿ ಹೋರಾಟ ನಡೆಸಬೇಕಿದೆ. ಹೊಗೇನಕಲ್ ವಿವಾದದಲ್ಲೂ ರಾಜ್ಯದ ಹಿತ ಕಾಪಾಡಿಕೊಳ್ಳಬೇಕು. ಇಂಥ ಎಲ್ಲ ಹೋರಾಟಗಳಲ್ಲೂ ಪಕ್ಷಾತೀತವಾಗಿ ಜತೆ ನಿಂತು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗುವುದು. ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಶಿವಮೊಗ್ಗದ ವಿಶ್ವೇಶ್ವರಯ್ಯ ಹಾಗೂ ಎಂಪಿಎಂ ಇಂಡಸ್ಟ್ರೀಸ್‌‌ಗಳನ್ನು ಪುನಶ್ಚೇತನ ಮಾಡಲಾಗುವುದು ಎಂದು ಹೇಳಿದರು. ಬೆಂಗಳೂರು-ಶಿವಮೊಗ್ಗ ನಡುವೆ ಇಂಟರ್‌‌‌ಸಿಟಿ ರೈಲು ಓಡಿಸಲು ಕೇಂದ್ರ ಹಸಿರು ನಿಶಾನೆ ತೋರಿದೆ. ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಮೇಲೆ ಮತ್ತಷ್ಟು ಒತ್ತಡ ಹೇರಲಾಗುವುದು ಎಂದರು.

ಆಡಳಿತದಲ್ಲಿ ಮುಖ್ಯಮಂತ್ರಿ ಪುತ್ರರ ಹಸ್ತಕ್ಷೇಪ ಹೆಚ್ಚಾಗಿದೆ ಎಂಬ ದೂರುಗಳಿಗೆ ಪ್ರತಿಕ್ರಿಯಿಸಿದ ಅವರು, ಅವೆಲ್ಲ ಆಧಾರ ರಹಿತ, ಪೂರ್ವಯೋಜಿತ ಟೀಕೆಗಳು ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಎಚ್‌ಡಿಕೆ, ಕಟೀಲ್, ಧರಂ ಸೇರಿ 9 ಕ್ರಿಮಿನಲ್‌‌ ಸಂಸದರು‍
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ತುಳಸಿಯಾನ ಸಂಸ್ಥೆಯಿಂದ 4ಕೋಟಿ ರೂ.ಪಂಗನಾಮ!
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ...
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...