|
| ಮುಖ್ಯಮಂತ್ರಿ ಹೇಳಿದರೆ ವಿಷ ಕುಡಿಯುವೆ: ಕೃಷ್ಣಯ್ಯ ಶೆಟ್ಟಿ |
| ಬೆಂಗಳೂರು, ಮಂಗಳವಾರ, 19 ಮೇ 2009 ( 16:40 IST ) | |
ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದರೂ ಮಾಡಲು ಸಿದ್ಧ. ಯಾವ ತ್ಯಾಗವನ್ನು ಮಾಡುತ್ತೇನೆ. ಯಡಿಯೂರಪ್ಪ ಹೇಳಿದರೆ ವಿಷ ಬೇಕಾದರೂ ಕುಡಿಯುತ್ತೇನೆ ಎಂದು ಮುಜರಾಯಿ ಸಚಿವ ಕೃಷ್ಣಯ್ಯ ಶೆಟ್ಟಿ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ಪುನರಚನೆ ಮಾಡಲು ಉದ್ದೇಶಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅದರಲ್ಲಿ ಸಂಚಕಾರ ಇದೆ ಎಂಬ ಸುಳಿವೂ ಇದ್ದುದರಿಂದ ಕೃಷ್ಣಯ್ಯ ಶೆಟ್ಟಿ ಮುಖ್ಯಮಂತ್ರಿ ಯಡಿಯೂರಪ್ಪ ಮನವೊಲಿಸಲು ಈ ವಿಷಯ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣಯ್ಯ ಶೆಟ್ಟಿ ಕೋಲಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ದುಡಿದಿದ್ದೇನೆ. ಪಕ್ಷಕ್ಕೆ ಯಾವುದೇ ದ್ರೋಹ ಬಗೆದಿಲ್ಲ ಎಂದರು.
ಇದೇ ವೇಳೆ ಒಂದಿಬ್ಬರು ಪಕ್ಷೇತರ ಅಭ್ಯರ್ಥಿಗಳನ್ನು ಸಂಪುಟದಿಂದ ಕೈಬಿಡುವ ವದಂತಿಗಳೂ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ಪಕ್ಷೇತರರು ಚುನಾವಣೆಯಲ್ಲಿ ಚೆನ್ನಾಗಿಯೇ ಕೆಲಸ ಮಾಡಿದ್ದೇವೆ. ನಮ್ಮನ್ನು ಮುಖ್ಯಮಂತ್ರಿ ಕೈಬಿಡುವುದಿಲ್ಲ. ನಮಗೆ ಅವರ ಮೇಲೆ ವಿಶ್ವಾಸ ಇದೆ ಎಂದು ಪಕ್ಷೇತರ ಸಚಿವ ಶಿವರಾಜ್ ತಂಗಡಗಿ ಹೇಳಿದರು.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|