ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಬೆಂಗಳೂರು, ಮಂಗಳವಾರ, 19 ಮೇ 2009   ( 17:27 IST )
''ಕರ್ನಾಟಕವನ್ನು ನಿರ್ಲಕ್ಷಿಸಿ ಅಭಿವೃದ್ಧಿ ಕಾರ್ಯಗಳಿಗೆ ತಾರತಮ್ಯ ಅನುಸರಿಸಿದರೆ, ಎಚ್ಚರ!'' ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟಕ್ಕೆ, ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 19ನ್ನು ನಿರಾಯಾಸವಾಗಿ ತನ್ನ ಬುಟ್ಟಿಯೊಳಗೆ ಹಾಕಿರುವ ಬಿಜೆಪಿಯ ಸವಾಲಿನ ನುಡಿ.

ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಆರು ಸೀಟು ಪಡೆಯುವ ಮೂಲಕ ಹೀನಾಯ ಫಲಿಂತಾಶ ದಾಖಲಿಸಿದರೂ, ಅಭಿವೃದ್ಧಿ ಕಾರ್ಯಗಳ ಸಂದರ್ಭ ಈ ಹಿಂದಿನಂತೆ ಮತ್ತೆ ಯುಪಿಎ ಸರ್ಕಾರ ಹೊಲಸು ರಾಜಕೀಯ ಮಾಡುವುದಿಲ್ಲ ಅಂದುಕೊಂಡಿದ್ದೇವೆ. ಅಭಿವೃದ್ಧಿ ಯೋಜನೆಗಳ ಸಂದರ್ಭ ರಾಜಕೀಯವನ್ನು ಎಳೆದು ತರುವುದು ನಮಗಿಷ್ಟವಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿ ಅಧಿಕಾರಕ್ಕೆ ಬಂದು ಒಂದು ವರ್ಷದಲ್ಲಿ ಮತ್ತೆ ಲೋಕಸಭಾ ಚುನಾವಣೆಯಲ್ಲೂ ಅತ್ಯುತ್ತಮ ಫಲಿತಾಂಶ ದಾಖಲಿಸುವುದು ರಾಜ್ಯ ಬಿಜೆಪಿಯ ಪಾಲಿಗೆ ದಾಖಲೆ ಎಂದು ಸದಾನಂದ ಗೌಡ ಹರ್ಷಭರಿತರಾಗಿ ನುಡಿದರು. ಬಿಜೆಪಿಯನ್ನು ಕೋಮುವಾದಿ ಪಕ್ಷ ಎಂದು ಪದೇ ಪದೇ ಆಪಾದಿಸುತ್ತಿದ್ದ ಕಾಂಗ್ರೆಸ್‌ಗೆ ಈ ಲೋಕಸಭೆ ಚುನಾವಣೆಯಲ್ಲೂ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದೂ ಗೌಡ ಬಣ್ಣಿಸಿದರು.

ರಾಷ್ಟ್ರೀಯವಾಗಿ ಕಾಂಗ್ರೆಸ್ ಅಲೆ ಇದ್ದರೂ, ವಿಧಾನಸಭೆ ಚುನಾವಣೆಯ ನಂತರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೇ ರಾಜ್ಯದ ಮತದಾರರು ಮತ ಚಲಾಯಿಸಿದ್ದಾರೆ. ಯಾಕೆ ಮತ್ತೆ ಬಿಜೆಪಿಗೇ ಓಟು ಮಾಡಿದಿರಿ ಎಂದು ಮತದಾರರನ್ನು ಕೇಳಿದರೆ, ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ, ಅಭಿವೃದ್ಧಿ ವಿಚಾರದಲ್ಲಿ ಯುಪಿಎ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿರುವುದು ಮತದಾರನಿಗೂ ಗೊತ್ತಿದೆ. ಅವರಿಂದ ಇದೇ ಉತ್ತರ ಬರುತ್ತದೆ. ಇಂತಹ ತಾರತಮ್ಯ ಮುಂದೆ ರಾಜಕೀಯವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯುತ್ತಲೇ ಹೋದರೆ ಮುಂದಿನ ಚುನಾವಣೆಯ ಹೊತ್ತಲ್ಲಿ ಖಂಡಿತ ಕಾಂಗ್ರೆಸ್‌ನ್ನು ಜನ ನಿವಾಳಿಸಿ ಎಸೆಯುತ್ತಾರೆ ಎಂದು ಗೌಡ ಹೇಳಿದರು.

ಈ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯ ನಿರಾಶಾದಾಯಕ ಪ್ರದರ್ಶನಕ್ಕೆ ಬೇಸರ ವ್ಯಕ್ತಪಡಿಸಿದ ಸದಾನಂದ ಗೌಡ, ಈ ಸೋಲಿಗೆ ಬಿಜಿಪಿ ಹಾಗೂ ಮಿತ್ರಪಕ್ಷಗಳ ಕುರಿತು ಪರಾಮರ್ಶೆಯನ್ನು ರಾಷ್ಟ್ರೀಯ ನಾಯಕರು ನಡೆಸುತ್ತಿದ್ದಾರೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮುಖ್ಯಮಂತ್ರಿ ಹೇಳಿದರೆ ವಿಷ ಕುಡಿಯುವೆ: ಕೃಷ್ಣಯ್ಯ ಶೆಟ್ಟಿ
ಪೇಯಿಂಗ್ ಗೆಸ್ಟ್ ಕಳ್ಳಿ ಪೊಲೀಸರ ಬಲೆಗೆ
ಕುಮಾರಸ್ವಾಮಿ ಸಚಿವ ಸ್ಥಾನಕ್ಕೆ ಸಿದ್ದು ತೀವ್ರ ವಿರೋಧ
ಸರ್ಕಾರ ಅತಂತ್ರಗೊಳಿಸುವ ಪ್ರತಿಪಕ್ಷಗಳ ಹಗಲುಗನಸು
ಭಾಷಾ ವಿವಾದ: ಕಾಗೇರಿ ವಿರುದ್ಧ ನ್ಯಾಯಾಂಗ ನಿಂದನೆ ದೂರು
ನೆಲ-ಜಲ-ಭಾಷೆಗಾಗಿ ಹೋರಾಡುವೆ:ಬಿ.ವೈ.ರಾಘವೇಂದ್ರ
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಹಣ ಬಲದಿಂದ ಬಿಜೆಪಿಗೆ ಜಯ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ...
ಕೇಂದ್ರ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆ.ಎಚ್.ಮುನಿಯಪ್ಪ
ದಾಖಲೆ ಪ್ರಮಾಣದಲ್ಲಿ ಮರು ಮೌಲ್ಯಮಾಪನ ಅರ್ಜಿ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...