|
| ಕುಮಾರಸ್ವಾಮಿ ಸಚಿವ ಸ್ಥಾನದ ಕನಸು ನನಸಾಗದು |
| ಬೆಂಗಳೂರು, ಬುಧವಾರ, 20 ಮೇ 2009 ( 15:56 IST ) | |
ಕೇಂದ್ರದ ಸಚಿವ ಸಂಪುಟ ಇನ್ನೇನು ಕೆಲವೇ ದಿನಗಳಲ್ಲಿ ರಚನೆಯಾಗಲಿದ್ದು, ಈ ಹೊಸ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಆಸೆ ಕೈಗೂಡುವ ಯಾವ ಲಕ್ಷಣಗಳು ಕಾಣುತ್ತಿಲ್ಲ.ಈ ಹಿಂದೆ ಕುಮಾರಸ್ವಾಮಿ ಈ ಸಂಬಂಧ ಸೋನಿಯಾ ಅವರನ್ನು ಭೆಟಿ ಮಾಡಿದ್ದರು. ಆದರೆ ಸಂಪುಟದಲ್ಲಿ ಸ್ಥಾನ ಕೊಡುವ ಬಗ್ಗೆ ಸೋನಿಯಾ ಗಾಂಧಿ ಅವರಿಂದ ಯಾವುದೇ ಸ್ಪಷ್ಟ ಭರವಸೆ ದೊರೆತಿಲ್ಲ.
ಸಂಪುಟ ರಚನೆ ಸಂದರ್ಭದಲ್ಲಿ ಸಾಧ್ಯವಾದರೆ ಕುಮಾರಸ್ವಾಮಿಯವರನ್ನು ಸೇರಿಸಿಕೊಳ್ಳುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಂದ ಉತ್ತರ ಸಿಕ್ಕಿದೆ. ಇದು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತದೆ ಎಂಬುದನ್ನು ಸಂಪುಟ ರಚನೆ ಆಗುವವರೆಗೆ ಕಾದು ನೋಡಬೇಕಾಗಿದೆ.
ಚುನಾವಣೆ ಮುನ್ನ ತೃತೀಯ ರಂಗದಲ್ಲಿ ಕಾಣಿಸಿಕೊಂಡಿದ್ದ ದೇವೇಗೌಡರು ಈಗ ಯುಪಿಎ ಬೆನ್ನ ಹಿಂದೆ ಬಿದ್ದು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಜೆಡಿಎಸ್ ಸದಸ್ಯರ ಸ್ಥಾನ ಧಾರೆ ಎರೆಯುತ್ತಿದ್ದೇವೆ ಎಂದು ಅಧಿಕೃತ ಪತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಒಪ್ಪಿಸಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು |
| |
|
|
|
|
|
|