|
| ಉಗ್ರರ ದಾಳಿ: ಕ್ರಿಕೆಟ್ ವಿಶ್ವಕಪ್ ಮೇಲೆ ಕರಿ ಛಾಯೆ |
| ಮೆಲ್ಬೋರ್ನ್ , ಸೋಮವಾರ, 1 ಡಿಸೆಂಬರ್ 2008 ( 11:07 IST ) | |
ಉಪಖಂಡದಲ್ಲಿನ ನಿರಂತರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಿಂದ ಜಂಟಿಯಾಗಿ ಆಯೋಜಿಸಲು ಉದ್ದೇಶಿಸಿರುವ 2011 ಕ್ರಿಕೆಟ್ ವಿಶ್ವಕಪ್ಗಾಗಿ ಐಸಿಸಿ ಪರ್ಯಾಯ ಸ್ಥಳವೊಂದರ ಬಗ್ಗೆ ಪರಿಗಣಿಸುತ್ತಿರುವುದರೊಂದಿಗೆ, ಈ ಮೆಗಾ ಟೂರ್ನಿ ಭಾರತ ಉಪಖಂಡದಲ್ಲಿ ನಡೆಯುವುದರ ಬಗ್ಗೆ ಅನುಮಾನಗಳು ಮೂಡಿವೆ.
ದಿ ಡೈಲಿ ಟೆಲಿಗ್ರಾಪ್ನಲ್ಲಿನ ವರದಿ ಪ್ರಕಾರ, ಐಸಿಸಿ ಮುಂದಿನ ವಾರ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ತನ್ನ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುವ ನಿರೀಕ್ಷೆ ಇದೆ.
ಒಂದು ವೇಳೆ ಐಸಿಸಿ ವಿಶ್ವಕಪ್ನ್ನು ಸ್ಥಳಾಂತರಿಸಲು ನಿರ್ಧರಿಸಿದರೆ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ಈ ಟೂರ್ನಿಯನ್ನು ಆಯೋಜಿಸುವಲ್ಲಿನ ಪ್ರಮುಖ ಸ್ಪರ್ಧಿಗಳಾಗಿದ್ದಾರೆ ಎಂಬುದಾಗಿ ವರದಿಯಲ್ಲಿ ತಿಳಿಸಲಾಗಿದೆ.
ಕ್ರಿಕೆಟ್ ಆಸ್ಟ್ರೇಲಿಯಾದ ಮುಖ್ಯ ಕಾರ್ಯಕಾರಿಣಿ ಸೌದರ್ಲೇಂಡ್ ಈಗಾಗಲೇ ಐಸಿಸಿ ಸಭೆಯಲ್ಲಿ 2011 ವಿಶ್ವಕಪ್ಗೆ ಸಂಬಂಧಿಸಿದ ಸುರಕ್ಷತೆ ಹಾಗೂ ಭದ್ರತಾ ಅಂಶಗಳು ಚರ್ಚೆಗೆ ಬರುವುದು ಅನಿವಾರ್ಯ ಎಂಬುದಾಗಿ ಹೇಳುವುದರೊಂದಿಗೆ ಈ ನಿಟ್ಟಿನಲ್ಲಿನ ಚಿಂತನೆಗೆ ಮುನ್ನುಡಿ ಇಟ್ಟಿದ್ದಾರೆ.
ಮುಂಬೈ ಘಟನೆಯಿಂದ ಕ್ರಿಕೆಟ್ ವಿಶ್ವಕಪ್ಗಾಗಿನ ಯೋಜನೆಗಳು ಬದಲಾಗುವ ಸಾಧ್ಯತೆ ಇದೆ ಆದರೆ ಉಪಖಂಡದ ವಿವಿಧ ಭಾಗಗಳಲ್ಲಿ ನಡೆಸಲು ಉದ್ದೇಶಿಸಲಾಗಿರುವ ವಿಶ್ವಕಪ್ ಮತ್ತು ಇತರ ಟೂರ್ನಿಗಳು ಯೋಜನೆಯಂತೆಯೇ ನಡೆಯುವುದನ್ನು ಎಲ್ಲರೂ ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದ್ದಾರೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|