ಯಾಹೂ! | ನನ್ನ ಯಾಹೂ! | ಮೇಲ್ | ಚಿತ್ರ
ಶೋಧ
 
   ಮುಖ ಪುಟ ಧರ್ಮ ಧಾರ್ಮಿಕ ಲೇಖನ
ಮಕರ ಪೊಂಗಲ್‌ ತಮಿಳರ ಸುಗ್ಗಿ ಹಬ್ಬ
- ವಿಷ್ಣು ಭಾರದ್ವಾಜ್‌
ಮಕರ ಸಂಕ್ರಾಂತಿಯನ್ನು ಭಾರತದಾದ್ಯಂತ ವಿವಿಧ ಹೆಸರುಗಳಲ್ಲಿ ಆಚರಿಸುತ್ತಾರೆ.ಉತ್ತರ ಭಾರತೀಯರು ಈ ದಿನ ಗಂಗೆಯಲ್ಲಿ ಮಿಂದು ಪಾವನರಾಗುತ್ತಾರೆ.

ಕನ್ನಡಿಗರು ಮಕರ ಸಂಕ್ರಾಂತಿಯನ್ನು ಕಾಲಮಾನ ಪರ್ವವಾಗಿ ಆಚರಿಸಿ ತಿಳಕಾಲು (ಎಳ್ಳುಕಾಳು) ಹಂಚಿ ಸಂತಸ ಆಚರಿಸಿದರೆ, ತಮಿಳು ನಾಡಿನಲ್ಲಿ ಇದು ಕೃಷಿಕರ ಹಬ್ಬವಾಗಿ ಆಚರಿಸಲ್ಪಡುತ್ತದೆ. ಇದೊಂದು ಫಸಲು ಕೊಯ್ಲಿನ ಹಬ್ಬ. ಉತ್ತಮ ಆದಾಯ ಬೆಳೆ ನೀಡಿದುಕ್ಕಾಗಿ ಸೂರ್ಯ ದೇವನಿಗೆ 'ಪೊಂಗಲ್‍' ಪೂಜೆಸಲ್ಲಿಸಿ ಕೃತಜ್ಞತೆ ಸಲ್ಲಿಸುವುದು ಇಲ್ಲಿ ಸಂಪ್ರದಾಯ.

ಚಳಿಗಾಲದಲ್ಲಿ ದೇಹವನ್ನು ಬಿಸಿಯಾಗಿಡುವಂತೆಯೂ ಈ ಹಬ್ಬದ ಆಹಾರ ವಿಧಾನಗಳು ನಡೆಯುತ್ತವೆ. ಹೆಚ್ಚಿನ ಶಕ್ತಿ ನೀಡುತ್ತದೆ.ಎಳ್ಳಿನ ಲಾಡು ತಯಾರಿಸಿ ಕಬ್ಬಿನ ಹಾಲಿನೊಂದಿಗೆ ಎರಕಹೊಯ್ದು ಪಾಕ ಮಾಡಿ ನೀಡುವುದು ಈ ಹಬ್ಬದ ಖಾದ್ಯಗಳಲ್ಲಿ ವಿಶಿಷ್ಟವಾಗಿರುತ್ತದೆ. ಈ ಬಾರಿ ಜ.15ರಂದು ಸೋಮವಾರ ಪೊಂಗಲ್‌ ಆಚರಣೆ.

ವಿಶೇಷವಾಗಿ ಬೆಳೆ ಖಟಾವಿನ ಸಂಭ್ರಮ ಸೂಚಿಸುವ ಈ ಪೊಂಗಲ್‌, ಒಗ್ಗೂಡಿ ಸಂಭ್ರಮಿಸುವ ಸಮೃದ್ಧಿಯ ಆಚರಣೆಯಾಗಿದೆ. ಪರಸ್ಪರ ಉಡುಗೊರೆ ನೀಡುವುದು.ಸಮೃದ್ಧಿ ನೀಡಿದ ದೇವರಿಗೆ ಪೂಜೆಕೈಗೊಳ್ಳುವುದು, ಪ್ರಾರ್ಥನೆಗಳು, ಇತ್ಯಾದಿಗಳೊಂದಿಗೆ, ದಿನದ ವಿಶೇಷವಾದ ಬೇಯಿಸಿದ ಅಕ್ಕಿ, ಅನ್ನದ ಖಾದ್ಯ ತಿಂಡಿಗಳೂ ಇರುತ್ತವೆ.

ಸಮೃದ್ಧಿಯ ಸಂಕೇತವಾಗಿರುವ ಪೊಂಗಲ್‌ ಪ್ರತಿ ವರ್ಷ ಎರಡನೇ ಬೆಳೆಯ ಕಟಾವಿನ ಹಂಗಾಮಿನಲ್ಲಿ ಫಸಲು ಕೂಡಿಸಿ ಹರ್ಷಾಚರಣೆಯ ಸಂತೋಷವಾಗಿ ಆಚರಿಸಲ್ಪಡುತ್ತದೆ.ಇತರ ರಾಜ್ಯಗಳಲ್ಲಿ ಇದು ಸಂಕ್ರಾಂತಿ ಅಥವಾ ಮಕರ ಸಂಕ್ರಾಂತಿ ಎಂಬ ಹೆಸರಲ್ಲಿ ವಿವಿಧ ರೀತಿಯ ವಿಧಿ ವಿಧಾನಗಳ ಮೂಲಕ ಆಚರಿಸಲ್ಪಡುತ್ತದೆ.

ಪಂಜಾಬ್‌ , ಹರಿಯಾಣಗಳಲ್ಲಿ ಪೊಂಗಲ್‌ಗೆ ಸಮನಾದ ಲೋಹ್ರಿ ಎಂಬ ಕೊಯ್ಲು ಹಬ್ಬ ಆಚರಿಸಲಾಗುತ್ತಿದೆ. ಪೊಂಗಲನ್ನು ತಮಿಳರ ತಿರುನಾಳ್‌ ಅಥವಾ ವಿಶೇಷ ದಿನ(ಹಬ್ಬ)ಎಂದು ಪರಿಗಣಿಸಲ್ಪಡುತ್ತದೆ. ಪೊಂಗಲ್ ಹಬ್ಬಾಚರಣೆ ಇಲ್ಲಿನ ಜವ ಜೀವನದಲ್ಲಿ ಹಾಸು ಹೊಕ್ಕಾಗಿರುತ್ತದೆ.

(ಮೂಲ - ವೆಬ್‌ದುನಿಯಾ)
1| 2
 
ಮತ್ತಷ್ಟು...
ದಶರಥನ ಪುತ್ರಶೋಕದ ಹಿನ್ನೆಲೆ
ಬಲಿ ಚಕ್ರವರ್ತಿ-ರಾವಣನ ಕತೆ
ರಾಮಾಯಣಕ್ಕೆ ನಾಂದಿ ಹಾಡಿದ ಘಟನೆ
ರಾವಣ ಕುಂಭಕರ್ಣ ಶೂರ್ಪನಖಿ ಜನನ
ಸಪ್ತಮುಕ್ತಿ ಕ್ಷೇತ್ರಗಳಲ್ಲೊಂದು ಕೊಲ್ಲೂರು ಮುಕಾಂಬಿಕಾ ಸನ್ನಿಧಿ
ರಾಮಾಯಣದ ಉಗಮ
ಮನರಂಜನೆ
ಚಿತ್ರ ಸುದ್ದಿ - ಯೋಗರಾಜ ಭಟ್ಟರು ಸುರಿಸಿರುವ ಮುಂಗಾರು ಮಳೆ ಜಯಭೇರಿ ಭಾರಿಸಿದೆ. ಈ ಚಿತ್ರ ನಿರ್ಮಾಪಕ ಕೃಷ್ಣಪ್ಪ ಅವರಿಗೆ ಕಾಂಚಾಣದ ಮಳೆಯನ್ನು ತಂದುಕೊಟ್ಟಿದೆ. ಕಾಮಿಡಿ ಟೈಂ ಗಣೇಶ್ ಅದೃಷ್ಟ ಖುಲಾಯಿಸಿದೆ. ಒಟ್ಟಾರೆ ರಾಜ್ಯದೆಲ್ಲೆಡೆ ಈಗ ಮಳೆಗೆ ಸೆಂಚುರಿ ರಂಗು. ಚಿತ್ರಪ್ರೇಮಿಗಳಿಗೆ ಮುಂಗಾರು ಮಳೆಯ ಹಾಡಿನದೇ ಗುಂಗು!
ಮುಂದೆ ಓದಿ|ಮತ್ತಷ್ಟು...
ಆರೋಗ್ಯ
AP
 
ಲಿವರ್ ಕ್ಯಾನ್ಸರ್‌ ತಗ್ಗಿಸುವ ಕಾಫಿ
ಹೆಚ್ಚು ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಮಾತನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಆದರೆ ಕಾಫಿ...
ಗರ್ಭಧಾರಣಾ ತೂಕ ಕಳೆಯಲು ವಾಕಿಂಗ್ ಸಹಕಾರಿ
ವಯಸ್ಸು, ಒತ್ತಡ ಗರ್ಭಪಾತಕ್ಕೆ ಕಾರಣ
ಧರ್ಮ
ಧಾರ್ಮಿಕ ಲೇಖನ - ಒಮ್ಮೆ ದಶರಥನು ಬೆಳದಿಂಗಳಿನಲ್ಲಿ ತನ್ನ ಬೇಟೆಯೂಡುವ ತುಡಿತವನ್ನು ತಣಿಸುವ ಸಲುವಾಗಿ ಕಾಡಿಗೆ...
ಮುಂದೆ ಓದಿ|ಮತ್ತಷ್ಟು...
Marketplace